
ಭದ್ರಾವತಿ(ಜು.13): ಸಂಜೀವಿನಿ- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯಿಂದ ಗುರುವಾರ ತಾಲೂಕಿನ ಸಿಂಗನಮನೆ, ಅಂತರಗಂಗೆ, ಬಾರಂದೂರು, ಅರಕೆರೆ, ಕೂಡ್ಲಿಗೆರೆ, ಹಿರಿಯೂರು ಸೇರಿ ಒಟ್ಟು 21 ಗ್ರಾಪಂಗಳಿಂದ ಪ್ರಧಾನಿ ಮೋದಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರಧಾನಿಯೊಂದಿಗೆ ಆಯಾ ಗ್ರಾಪಂ ವ್ಯಾಪ್ತಿಯ ಗ್ರಾಮೀಣ ಜನರು ಹಾಗೂ ಗ್ರಾಪಂ ಅಧ್ಯಕ್ಷರು, ಸದಸ್ಯರು ನೇರವಾಗಿ ಸಂವಾದ ನಡೆಸಲು ಅಗತ್ಯ ಸಿದ್ದತೆ ಕೈಗೊಳ್ಳಲಾಗಿತ್ತು. ಆದರೆ ಯಾವ ಗ್ರಾಮ ಪಂಚಾಯಿತಿಯಲ್ಲೂ ಪ್ರಧಾನಿಯೊಂದಿಗೆ ಸಂವಾದ ನಡೆಸಲು ಸಾಧ್ಯವಾಗಿಲ್ಲ.
ದೇಶಾದ್ಯಂತ ಏಕಕಾಲಕ್ಕೆ ನಡೆದ ಸುಮಾರು 1 ಗಂಟೆ ಸಮಯದ ಸಂವಾದ ಸಮಯದಲ್ಲಿ ಸರ್ವರ್ ಸಮಸ್ಯೆ ಎದುರಾಯಿತು. ಈ ಹಿನ್ನೆಲೆಯಲ್ಲಿ ಸಂವಾದ ನಡೆಸಲು ಸಾಧ್ಯವಾಗಲಿಲ್ಲ ಎಂದು ಸಿಂಗನಮನೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪರಮೇಶ್ವರಪ್ಪ ತಿಳಿಸಿದರು.
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಯಲ್ಲೂ ಪ್ರಧಾನಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ದೇಶದ ಆಯ್ದ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ನೇರವಾಗಿ ಸಂವಾದ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.