
ಮೈಸೂರು, ಅ.11 : ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಿದರು.
ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ ಸಿಂಹ ಮಾತನಾಡಿ, ನೀವು ತಂದಿರುವ ಮುದ್ರಾ ಯೋಜನೆಯಿಂದಾಗಿ ರೈತರಿಗೆ ತುಂಬಾ ಅನುಕೂಲವಾಗಿದೆ ಹಾಗೂ ಸಣ್ಣ ಹಿಡುವಳಿದಾರರಿಗೆ ಈ ಯೋಜನೆ ಪೂರ್ಣ ಪ್ರಮಾಣದಲ್ಲಿ ತಲುಪಿದೆ.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರಿಗೆ ಕೈಗೆಟುಕುವ ಬಡ್ಡಿ ದರದಲ್ಲಿ ಸಾಲ ನೀಡಿ ಸ್ವಾವಲಂಬಿಗಳಾಗಲು ತುಂಬಾ ಅನುಕೂಲವಾಗಿದೆ. ನಾವು ಮಾಡಿರುವ ಕಾಮಗಾರಿಗಳಲ್ಲಿ ವಿಶ್ವಮಾನವ ಎಕ್ಸಪ್ರೆಸ್ ರೈಲು ಮೈಸೂರಿನಿಂದ ಕೆಲಸಕ್ಕೆಂದು ಬೆಂಗಳೂರಿಗೆ ಹೋಗುವ ನೌಕರರಿಗೆ ಮತ್ತು ಸರ್ಕಾರಿ ನೌಕರರಿಗೆ ಸಹಾಯವಾಗಿದೆ.
ಅಲ್ಲದೆ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದೇನೆ. ಇಂದು ಮೈಸೂರು ಕೊಡಗು ಅಭಿವೃದ್ಧಿಯ ಪಥದಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಸಂವಾದದಲ್ಲಿ ಸಾರ್ವಜನಿಕರು ಕೇಳಿದ ಪ್ರಶ್ನೆಗಳಿಗೆ ಮೋದಿ ಉತ್ತರಿಸಿದರು. ಶಾಸಕರಾದ ಎಲ್. ನಾಗೇಂದ್ರ, ಬಿ. ಹರ್ಷವರ್ಧನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ. ಶಿವಣ್ಣ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.