
ಪಟನಾ(ಅ.08): ದೇಶದ ಆರ್ಥಿಕತೆಗೆ ಸಂಬಂಧಿಸಿದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸರಣಿ ಟೀಕೆ ಮಾಡುತ್ತಿರುವ ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ, ಶೀಘ್ರವೇ ಪ್ರಧಾನಿಯೊಂದಿಗೆ ವೇದಿಕೆ ಹಂಚಿಕೊಳ್ಳುವ ಸಾದ್ಯತೆ ಇದೆ.
ಅ.14ರಂದು ಪಟನಾ ವಿವಿಯ ಶತಮಾನೋತ್ಸವ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ. ನಮ್ಮ ಆಹ್ವಾನವನ್ನು ಪ್ರಧಾನಿ ಕಾರ್ಯಾಲಯ ಪುರಸ್ಕರಿಸಿದೆ. ಅಲ್ಲದೆ, ವಿವಿಯ ಹಳೇ ವಿದ್ಯಾರ್ಥಿಯಾಗಿರುವ ಮಾಜಿ ವಿತ್ತ ಸಚಿವ ಯಶವಂತ್ ಸಿನ್ಹಾ ಅವರಿಗೂ ಆಹ್ವಾನಿಸಲಾಗಿದೆ ಎಂದು ವಿವಿ ಕುಲ ಪತಿ ರಾಶ್ ಬಿಹಾರಿ ಪ್ರಸಾದ್ ಸಿಂಗ್ ತಿಳಿಸಿದ್ದಾರೆ.
ಒಂದು ವೇಳೆ ಈ ಇಬ್ಬರು ನಾಯಕರು ಅಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಲ್ಲಿ, ದೇಶದ ಆರ್ಥಿಕ ಕುಸಿತ ಸಂಬಂಧವಾಗಿ ಪರಸ್ಪರ ಒಬ್ಬರಿಗೊಬ್ಬರ ವಿರುದ್ಧ ಟೀಕೆ ಮಾಡಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಯಶವಂತ ಸಿನ್ಹಾ ಅವರು ಇದೇ ಮೊದಲ ಬಾರಿಗೆ ಒಂದೇ ವೇದಿಕೆಯಲ್ಲಿ ಭಾಗವಹಿಸಿದಂತಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.