ಭಯೋತ್ಪಾದಕರ ಕ್ರೂರ ದಾಳಿ: ಏನಂದ್ರು ಪ್ರಧಾನಿ ಮೋದಿ?

Published : Feb 14, 2019, 07:17 PM IST
ಭಯೋತ್ಪಾದಕರ ಕ್ರೂರ ದಾಳಿ: ಏನಂದ್ರು ಪ್ರಧಾನಿ ಮೋದಿ?

ಸಾರಾಂಶ

ಉಗ್ರರ ಕುಕೃತ್ಯಕ್ಕೆ ಭಾರತೀಯ ಸೇನೆಯೇ ನಲುಗಿ ಹೋಗಿದೆ. ಕಣಿವೆ ರಾಜ್ಯದಲ್ಲಿ ನಡೆದ ಭೀಕರ ದಾಳಿಗೆ ಹುತಾತ್ಮರಾಗಿದ್ದು 26 ಮಂದಿ ವೀರ ಯೋಧರು. ಈ ಪೈಶಾಚಿಕ ಕೃತ್ಯವನ್ನು ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದಾರೆ. 

ಶ್ರೀನಗರ(ಫೆ.14): ಉರಿ ಸೇನಾ ನೆಲೆ ಮೇಲೆ ನಡೆದ ದಾಳಿಯ ಬಳಿಕ ಕಣಿವೆಯಲ್ಲಿ ಉಗ್ರರು ಮತ್ತೊಂದು ದೊಡ್ಡ ದಾಳಿ ನಡೆಸಿದ್ದು, ಸಿಆರ್ ಪಿಎಫ್ ಯೋಧರ ವಾಹನದ ಮೇಲೆ IED ಸ್ಫೋಟಿಸಿದ್ದಾರೆ.

ಉಗ್ರರ ಈ ಪೈಶಾಚಿಕ ಕೃತ್ಯಕ್ಕೆ 26 ಯೋಧರು ಹುತಾತ್ಮರಾಗಿದ್ದಾರೆ.  ಯೋಧರ ಮೇಲೆ ದೌರ್ಜನ್ಯವೆಸಗಿದ ಉಗ್ರರ ಕೃತ್ಯಕ್ಕೆ ಮೋದಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಉರಿ ನಂತರದ ದೊಡ್ಡ ದಾಳಿ: 20 ಯೋಧರು ಹುತಾತ್ಮ!

‘ಯೋಧರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ. ಉಗ್ರರ ಈ ದಾಳಿ ಅತ್ಯಂತ ಹೀನ, ಘನಘೋರ ಕೃತ್ಯ. ಇಡೀ ದೇಶ ಹುತಾತ್ಮ ಯೋಧರ ಕುಟುಂಬಗಳಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲಲಿದೆ' ಎಂದು ಮೋದಿ ಗುಡುಗಿದ್ದಾರೆ.

ಉಗ್ರರ ದಾಳಿಗೆ ಅರುಣ್ ಜೇಟ್ಲಿ ಖಂಡನೆ ವ್ಯಕ್ತಪಡಿಸಿದ್ದು,  ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ. ಉಗ್ರರಿಗೆ ಮರೆಯಲಾಗದ ಪಾಠ ಕಲಿಸುತ್ತೇವೆ ಎಂದು ಟ್ವಿಟ್ಟರ್ ನಲ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಎಚ್ಚರಿಕೆ ನೀಡಿದ್ದಾರೆ.

'ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ಮೇಲೆ ಕೃತ್ಯ ಖಂಡನೆ. ಯೋಧರು ಹುತಾತ್ಮರಾದ ನೋವು ಹೇಳಿಕೊಳ್ಳಲು ಪದಗಳೇ ಇಲ್ಲ. ಹುತಾತ್ಮ ಯೋಧರ ಕುಟುಂಬಕ್ಕೆ ನನ್ನ ಸಂತಾಪ ಇದೆ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!