
ನವದೆಹಲಿ (ಡಿ. 22): ನೋಟು ಅಮಾನ್ಯ ಕ್ರಮದ ಬಗ್ಗೆ ನಾನು ಮಾತನಾಡಿದರೆ ಭೂಕಂಪವೇ ಸಂಭವಿಸಿಬಿಡುತ್ತದೆ ಎಂದಿದ್ದ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿಗೆ ಭಾಷಣ ಮಾಡುವ ಕಲೆ ಕರಗತವಾಗಿರುವುದು ನನ್ನ ಸಂತೋಷಕ್ಕೆ ಮಿತಿಯೇ ಇಲ್ಲವೆಂದು ಎಂದು ಮೋದಿ ಹೇಳಿದ್ದಾರೆ.
ನಮ್ಮಲ್ಲಿ ಕೆಲವು ಯುವ ಮುಖಂಡರಿದ್ದಾರೆ. ಅವರು ಹೇಗೆ ಮಾತನಾಡಬೇಕೆಂದು ಕಲಿಯುತ್ತಿದ್ದಾರೆ. ಇದರಿಂದ ನನ್ನ ಸಂತೋಷಕ್ಕೆ ಪಾರವೇ ಇಲ್ಲ. ಅವರು ಮಾತನಾಡುತ್ತಿದ್ದಾರೆ ಹಾಗಾಗಿ ಭೂಕಂಪ ಸಂಭವಿಸಿಲ್ಲ ಎಂದು ರಾಹುಲ್ ಗಾಂಧಿ ಹೆಸರನ್ನು ಹೇಳದೇ ಮೋದಿ ಅಣಕವಾಡಿದ್ದಾರೆ.
ಪ್ರಧಾನಿ ಮೋದಿಯವರ ಕ್ಷೇತ್ರ ವಾರಣಾಸಿಯಲ್ಲಿರುವ ಹಿಂದೂ ಬನಾರಸ್ ವಿವಿಯಲ್ಲಿ ಭಾಷಣ ಮಾಡುವ ವೇಳೆ ರಾಹುಲ್ ಹೆಸರನ್ನು ಪ್ರಸ್ತಾಪಿಸದೇ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.