
ನವದೆಹಲಿ : ಮಾವೋವಾದಿಗಳು ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಲಾದ ಭದ್ರತೆಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ.
ನಕ್ಸಲೀಯರ ಬೆದರಿಕೆ ವರದಿಗಳ ಕಾರಣ ಸೋಮವಾರ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬ, ಗುಪ್ತಚರ ದಳದ ನಿರ್ದೇಶಕ ರಾಜೀವ್ ಜೈನ್ ಅವರೂ ಇದ್ದರು.
ಸಭೆಯಲ್ಲಿ ರಾಜನಾಥ ಸಿಂಗ್ ಅವರು ಪ್ರಧಾನಿಯವರಿಗೆ ನೀಡಿರುವ ಭದ್ರತೆಯನ್ನು ಹೆಚ್ಚಿಸಬೇಕು ಎಂದು ಸೂಚಿಸಿದರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಮೋದಿ ಅವರಿಗೆ ಈಗ ಎಸ್ಪಿಜಿ ಭದ್ರತೆ ಇದೆ.
ರಾಜೀವ ಗಾಂಧಿ ಅವರ ಶೈಲುಯಲ್ಲಿ ಮೋದಿ ಅವರನ್ನು ಹತ್ಯೆ ಮಾಡಬೇಕು ಎಂಬ ಪತ್ರವನ್ನು ದಿಲ್ಲಿಯ ಮನೆಯೊಂದರಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿತ್ತು. ಮಹಾರಾಷ್ಟ್ರದ ಭೀಮಾ ಕೋರೆಗಾಂವ್ ಗಕಭೆಗೆ ಸಂಬಂಧಿಸಿದಂತೆ ಮಾವೋವಾದಿಗಳ ಜತೆ ನಂಟು ಹೊಂದಿದ್ದಾರೆ ಎನ್ನಲಾದ ಕೆಲವರ ನಿವಾಸಗಳ ಮೇಲೆ ದಾಳಿ ನಡೆದಾಗ ಈ ಪತ್ರವು ಸಿಕ್ಕಿತ್ತು ಎಂದು ಪುಣೆ ಪೊಲೀಸರು ಜೂನ್ 7ರಂದು ಕೋರ್ಟ್ಗೆ ತಿಳಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.