ಸ್ವತಂತ್ರ ಪ್ಯಾಲೇಸ್ತೀನ್ ಕನಸಿಗೆ ಮೋದಿ ಬಲ; ’ನಮೋ’ ಸಹಾಯ ಯಾಚಿಸಿದ ಪ್ರಧಾನಿ ಅಬ್ಬಾಸ್

Published : Feb 11, 2018, 10:46 AM ISTUpdated : Apr 11, 2018, 01:05 PM IST
ಸ್ವತಂತ್ರ ಪ್ಯಾಲೇಸ್ತೀನ್ ಕನಸಿಗೆ ಮೋದಿ ಬಲ; ’ನಮೋ’ ಸಹಾಯ ಯಾಚಿಸಿದ ಪ್ರಧಾನಿ ಅಬ್ಬಾಸ್

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಪ್ಯಾಲೆಸ್ತೀನ್ ರಾಷ್ಟ್ರ ಭೇಟಿಯ ಅಂಗವಾಗಿ ಪ್ಯಾಲೆಸ್ತೀನ್ ಅಧ್ಯಕ್ಷ ಮೆಹಮೂದ್ ಅಬ್ಬಾಸ್ ಅವರನ್ನು ಭೇಟಿ ಮಾಡಿ ‘ಶಾಂತಿ ಸಮಾಲೋಚನೆ’ ನಡೆಸಿದರು.

ರಮಲ್ಲಾ (ಪಶ್ಚಿಮ ದಂಡೆ): ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಪ್ಯಾಲೆಸ್ತೀನ್ ರಾಷ್ಟ್ರ ಭೇಟಿಯ ಅಂಗವಾಗಿ ಪ್ಯಾಲೆಸ್ತೀನ್ ಅಧ್ಯಕ್ಷ ಮೆಹಮೂದ್ ಅಬ್ಬಾಸ್ ಅವರನ್ನು ಭೇಟಿ ಮಾಡಿ ‘ಶಾಂತಿ ಸಮಾಲೋಚನೆ’ ನಡೆಸಿದರು.

ಇದೇ ವೇಳೆ ಪ್ಯಾಲೆಸ್ತೀನ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದರ ನಿರ್ಮಾಣಕ್ಕೆ ಸಂಬಂಧಿಸಿದಂತೆ 30 ದಶಲಕ್ಷ ಡಾಲರ್ ಒಪ್ಪಂದ ಸೇರಿದಂತೆ 50 ದಶಲಕ್ಷ ಡಾಲರ್ ಮೌಲ್ಯದ ವಿವಿಧ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಪ್ಯಾಲೆಸ್ತೀನ್‌'ಗೆ ಭೇಟಿ ನೀಡುತ್ತಿರುವ ಮೊದಲ ಭಾರತೀಯ ಪ್ರಧಾನಿ ಎನ್ನಿಸಿಕೊಂಡಿರುವ ನರೇಂದ್ರ ಮೋದಿ ಅವರನ್ನು ಅಧ್ಯಕ್ಷರ ನಿವಾಸಕ್ಕೆ ಅಬ್ಬಾಸ್ ಖುದ್ದಾಗಿ ಆತ್ಮೀಯ ರೀತ್ಯ ಸ್ವಾಗತಿಸಿದರು. ಬಳಿಕ ಇಬ್ಬರೂ ನಾಯಕರು ಸಮಾಲೋಚನೆ ನಡೆಸಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಪ್ಯಾಲೆಸ್ತೀನ್ ಜನತೆಯ ಹಿತಕ್ಕೆ ಅನುಗುಣವಾಗಿ ಸಹಕಾರ ನೀಡಲು ಭಾರತ ಸರ್ಕಾರ ಸಿದ್ಧವಿದೆ. ಈ ಪ್ರದೇಶದಲ್ಲಿ ಶಾಂತಿ ಮರುಕಳಿಸಲಿದೆ ಎಂಬುದು ಭಾರತದ ಆಶಾಭಾವನೆಯಿದೆ. ಇದು ಸುಲಭವಲ್ಲ ಎಂಬುದು ಗೊತ್ತು. ಆದರೆ ಈ ನಿಟ್ಟಿನಲ್ಲಿ ಕಾರ‌್ಯನಿರ್ವಹಿಸೋಣ’ ಎಂದು ಮೋದಿ ಹೇಳಿದರು. ಇದೇ ವೇಳೆ ಭಾರತೀಯ ನಾಯಕತ್ವವನ್ನು ಹೊಗಳಿದ ಅಬ್ಬಾಸ್, ‘ಭಾರತ ಯಾವತ್ತೂ ಪ್ಯಾಲೆಸ್ತೀನ್ ಶಾಂತಿಯ ಪರ ವಹಿಸಿದೆ. ಪ್ಯಾಲೆಸ್ತೀನನ್ನು ಸ್ವತಂತ್ರ ದೇಶವನ್ನಾಗಿಸಲು ಮಾತುಕತೆಗೆ ಸದಾ ಸಿದ್ಧರಿದ್ದೇವೆ. ಈ ನಿಟ್ಟಿನಲ್ಲಿ ಇಸ್ರೇಲ್ ಜತೆ ಶಾಂತಿ ಪ್ರಕ್ರಿಯೆ ನಡೆಸಲು ಭಾರತ ಸಹಕಾರ ನೀಡಬೇಕು’ ಎಂದು ಆಗ್ರಹಿಸಿದರು.

ಇತ್ತೀಚೆಗೆ ವಿವಾದಿತ ಜೆರುಸಲೇಂ ನಗರವನ್ನು ಅಮೆರಿಕ ಅಧಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ರಾಜಧಾನಿ ಎಂದು ಘೋಷಣೆ ಮಾಡಿದಾಗ, ಭಾರತವು ವಿಶ್ವಸಂಸ್ಥೆಯಲ್ಲಿ ಟ್ರಂಪ್ ಅವರ ಈ ಘೋಷಣೆಯ ವಿರುದ್ಧ ನಿಂತು ಪ್ಯಾಲೆಸ್ತೀನನ್ನು ಬೆಂಬಲಿಸಿತ್ತು. ಈ ಹಿನ್ನೆಲೆಯಲ್ಲಿ ಅಬ್ಬಾಸ್ ಶ್ಲಾಘನೆ ಮತ್ತು ಶಾಂತಿ ಪ್ರಕ್ರಿಯೆಯಲ್ಲಿ ಭಾರತದ ಸಹಕಾರ ಬೇಡಿಕೆಗಳು ಮಹತ್ವ ಪಡೆದಿವೆ. ಒಪ್ಪಂದಗಳು: ಪ್ಯಾಲೆಸ್ತೀನ್‌ನ ಬೈತ್ ಸಹೂರ್‌ನಲ್ಲಿ  30  ದಶಲಕ್ಷ ಡಾಲರ್ ಮೊತ್ತದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, 5  ದಶಲಕ್ಷ ಡಾಲರ್ ವೆಚ್ಚದಲ್ಲಿ ಮಹಿಳಾ ಸಬಲೀಕರಣ ಕೇಂದ್ರ, ೫ ದಶಲಕ್ಷ ಡಾಲರ್ ಮೊತ್ತ ದಲ್ಲಿ ಶಿಕ್ಷಣ ಅಭಿವೃದ್ಧಿ ಕೇಂದ್ರ ಸ್ಥಾಪನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಪಾಕಿಸ್ತಾನಿ ನಾಯಕನ ಹೆಸರಿನಲ್ಲಿ ಮುಂಬೈನಲ್ಲಿ ಇನ್ನೂ ಇದೆ 2.5 ಎಕರೆಯ ಬೃಹತ್ ಬಂಗ್ಲೆ
ಸ್ಯಾಂಡಲ್‌ವುಡ್ ನಿರ್ಮಾಪಕಿ ಪುಷ್ಪಾ ಅರುಣ್‌ಕುಮಾರ್‌ ಹಾಕಿದ್ದ ಅಕ್ರಮ ಕಾಂಪೌಂಡ್ ತೆರವು