
ಬಹ್ರೈಚ್(ಡಿ.11): ಗುಜರಾತ್'ನ ಬನಸ್ಕಾಂತಾದಲ್ಲಿ ಶನಿವಾರ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದ ಪ್ರಧಾನಿ ಮೋದಿ ಇಂದು ತಮ್ಮ ವಾಕ್'ಪ್ರವಾಹವನ್ನು ಮುಂದುವರೆಸಿದ್ದಾರೆ.
ಬಹ್ರೈಚ್ನಲ್ಲಿ ಬಿಜೆಪಿ ಪರಿವರ್ತನ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ‘‘ನೀವು ಯಾವ ಪಕ್ಷಗಳನ್ನು ತಿರಸ್ಕರಿಸಿದಿರೋ, ಅವರು ಇವತ್ತು ಉಭಯ ಸದನಗಳ ಕಲಾಪಗಳನ್ನು ಕೊಚ್ಚಿ ಹೋಗುವಂತೆ ಮಾಡುತ್ತಿದ್ದಾರೆ. ಸರಿಯಾಗಿ 20 ದಿನಗಳಿಂದ ಕಲಾಪಗಳೇ ನಡೆದಿಲ್ಲ,’’ ಎನ್ನುವ ಮೂಲಕ ಮೋದಿ ಮತ್ತೊಮ್ಮೆ ಪ್ರತಿಪಕ್ಷಗಳ ವಿರುದ್ಧ ಕೆಂಡಕಾರಿದ್ದಾರೆ.
ಇದಕ್ಕೂ ಮೊದಲು, ಹವಾಮಾನ ವೈಪರೀತ್ಯದಿಂದಾಗಿ ಮೋದಿಯವರಿದ್ದ ವಾಯುಪಡೆ ಹೆಲಿಕಾಪ್ಟರ್ ಬಹ್ರೈಚ್ನಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದ ಕಾರಣ, ಅದು ಲಖನೌಗೆ ತೆರಳಿತು. ನಂತರ ಲಖನೌನಿಂದಲೇ ಪ್ರಧಾನಿ ಮೋದಿ ಮೊಬೈಲ್ ಮೂಲಕ ಬಹ್ರೈಚ್ನಲ್ಲಿ ಸೇರಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದರು.
ಗೆಲವು ನಮ್ಮದೇ:
‘‘ಸಂಸತ್ನಲ್ಲಿ ಚರ್ಚೆಗೆ ನಾವು ಸಿದ್ಧರಿದ್ದೇವೆ. ಆದರೆ, ಪ್ರತಿಪಕ್ಷಗಳು ಗದ್ದಲವೆಬ್ಬಿಸುತ್ತಾ, ನಮಗೆ ಮಾತನಾಡಲು ಬಿಡುತ್ತಿಲ್ಲ. ಆ ಪಕ್ಷಗಳು ಯಾವತ್ತೂ ಪ್ರಾಮಾಣಿಕತೆಯ ಹಾದಿಯಲ್ಲಿ ಸಾಗಿದ್ದೇ ಇಲ್ಲ. ಆದರೆ, ನಾವು ಭ್ರಷ್ಟಾಚಾರದ ವಿರುದ್ಧದ ಈ ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇವೆ,’’ ಎಂದರು. ನೋಟು ಅಮಾನ್ಯದ ಕುರಿತೂ ಪ್ರಸ್ತಾಪಿಸಿದ ಅವರು, ‘‘ನಮ್ಮ ಸರ್ಕಾರವು ಕಪ್ಪುಕುಳಗಳ ಹಿಂದೆ ಬಿದ್ದಿರುವುದು ನಿಮಗೆ ಗೊತ್ತೇ ಇದೆ. ನಾವು ಬಡವರ ಪರ ಕೆಲಸ ಮಾಡಲು ಬದ್ಧ. ದೇಶ ಅಭಿವೃದ್ಧಿಯ ಪಥದಲ್ಲಿ ಸಾಗಲಿ ಎಂದು ಜನರು ಕೂಡ ಕೆಲವೊಂದು ನೋವುಗಳನ್ನು ಸಹಿಸಿಕೊಂಡಿದ್ದಾರೆ,’’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.