
ನವದೆಹಲಿ(ಏ.10): ವಿರೋಧ ಪಕ್ಷದವರು ಸಂಸತ್ ಕಲಾಪವನ್ನು ಅಡ್ಡಿ ಪಡಿಸುತ್ತಿರುವ ನಡೆ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಏ.12) ರಂದು ಒಂದು ದಿನದ ಉಪವಾಸ ಕೈಗೊಳ್ಳುತ್ತಿದ್ದಾರೆ.
ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಶ್ನಿಮ ಬಂಗಾಳದ ಹುಬ್ಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.ನಿನ್ನೆಯಷ್ಟೆ ಕಾಂಗ್ರೆಸ್ ಪಕ್ಷ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ದೇಶದಲ್ಲಿ ಶಾಂತಿ ಸುವ್ಯವಸ್ತೆಯನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ಕೈಗೊಂಡಿತ್ತು. ಕೆಲವು ಮುಖಂಡರು ಉಪವಾಸ ಕೂಡ ಕೈಗೊಂಡಿದ್ದರು.
ಪ್ರಧಾನಿಯವವರು ಉಪವಾಸ ಕೈಗೊಂಡರೂ ನಿತ್ಯದ ಕಚೇರಿ ಕಾರ್ಯಚಟುವಟಿಕೆಗಳಿಗೆ ಯಾವುದೇ ಕುಂದುಂಟಾಗುವುದಿಲ್ಲ. ಎಂದಿನಂತೆ ಕಡತಗಳ ವಿಲೇವಾರಿಗಳನ್ನು ಪರಿಶೀಲಿಸಲಿದ್ದಾರೆ. ಸಾರ್ವಜನಿಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ. ಅಲ್ಲದೆ ನಾಳೆ ಜ್ಯೋತಿಬಾಫುಲೆ ಜನ್ಮದಿನಾಚರಣೆ ಪ್ರಯುಕ್ತ ವಿಡಿಯೋ ಕಾನ್ಫೆರನ್ಸ್ ಮೂಲಕ ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.