
ನವದೆಹಲಿ (ಡಿ.29): 'ನಾನು ಆ್ಯಪ್ನಲ್ಲಿ ಗುಡ್ ಮಾರ್ನಿಂಗ್ ಸಂದೇಶ ಕಳುಹಿಸಿದರೆ ಅದಕ್ಕೆ ಐದಾರು ಸಂಸದರನ್ನು ಹೊರತುಪಡಿಸಿ ಉಳಿದವರಾರೂ ಪ್ರತಿಕ್ರಿಯಿಸುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬೇಸರ ಹೊರಹಾಕಿದ್ದಾರೆ.
ಸಂಸತ್ ಕಲಾಪ ಆರಂಭಕ್ಕೂ ಮುನ್ನ ಬಿಜೆಪಿ ಸಂಸದರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಸಂಸದರಿಗೆ ‘ನರೇಂದ್ರ ಮೋದಿ ಆ್ಯಪ್’ ಅನ್ನು ಸಕ್ರಿಯವಾಗಿ ಬಳಸುವಂತೆ ಸೂಚಿಸಿದರು. ಮುಂಜಾನೆಯ ಶುಭಾಶಯದೊಂದಿಗೆ ನಾನು ಮಹತ್ವದ ಸಂದೇಶಗಳನ್ನು ಕಳುಹಿಸುತ್ತೇನೆ. ಆದರೆ, ಅದನ್ನು ಬಹುತೇಕರು ಗಮನಿಸುವುದೇ ಇಲ್ಲ. ಆ್ಯಪ್ ಅನ್ನು ಎಲ್ಲರೂ ಸಕ್ರಿಯವಾಗಿ ಬಳಸುವಂತೆ ಕಿವಿಮಾತು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.