
ಮಥುರಾ(ಸೆ.11): ಪ್ಲ್ಯಾಸ್ಟಿಕ್ ಬಳಕೆ ನಿಲ್ಲಿಸುವಂತೆ ಆ.15 ರ ತಮ್ಮ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಕೆಂಪುಕೋಟೆಯಿಂದ ದೇಶಕ್ಕೆ ಕರೆ ಕೊಟ್ಟಿದ್ದರು. ಆದರೆ ಸುಮ್ಮನೆ ಹೇಳಿ ಮರೆಯವುದು ಮೋದಿ ಜಾಯಮಾನವಲ್ಲ.
ಇತರರಿಗೆ ಬುದ್ಧಿವಾದ ಹೇಳುವ ಜೊತೆಗೆ ತಾವೂ ಅದನ್ನು ಪಾಲಿಸುವ ಜಾಯಮಾನವುಳ್ಳ ಪ್ರಧಾನಿ ಮೋದಿ, ಅದರಂತೆ ಉತ್ತರಪ್ರದೇಶದ ಮಥುರಾದಲ್ಲಿ ಸ್ವಚ್ಛತಾ ಕರ್ಮಚಾರಿಗಳೊಂದಿಗೆ ಸೇರಿ ಪ್ಲ್ಯಾಸ್ಟಿಕ್ ಕಸವನ್ನು ಬೇರ್ಪಡಿಸಿ ಇಡೀ ದೇಶಕ್ಕೆ ಪ್ಲ್ಯಾಸ್ಟಿಕ್ ಬಳಕೆಗೆ ಅಂತ್ಯ ಹಾಡುವಂತೆ ಸಂದೇಶ ರವಾನಿಸಿದ್ದಾರೆ.
ಮಥುರಾದಲ್ಲಿ ನಡೆದ ‘ಸ್ವಚ್ಛತಾ ಹೀ ಸೇವಾ’(ಸ್ವಚ್ಛತೆಯೇ ಸೇವೆ)ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರೊಂದಿಗೆ ಸೇರಿ ಪ್ರಧಾನಿ ಮೋದಿ ಪ್ಲ್ಯಾಸ್ಟಿಕ್ ಕಸವನ್ನು ಬೇರ್ಪಡಿಸಿ ಗಮನ ಸೆಳೆದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಪ್ಲ್ಯಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಕಾಲ ಸನ್ನಿಹಿತವಾಗಿದ್ದು, ಸಿಂಗಲ್ ಯೂಸ್ ಪ್ಲ್ಯಾಸ್ಟಿಕ್ ಬಳಕೆಯನ್ನು ಕೊನೆಗಾಣಿಸಲು ಜನರ ಸಹಕಾರ ಕೋರಿದರು.
2022ರಲ್ಲಿ ಸಿಂಗಲ್ ಯೂಸ್ ಪ್ಲ್ಯಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.