ರಾಜ್ಯಸಭೆ ಕಡತದಿಂದ ತೆಗೆಯುವಂತ ಪದ ಬಳಸಿದ್ರಾ ಮೋದಿ?

Published : Aug 10, 2018, 04:44 PM IST
ರಾಜ್ಯಸಭೆ ಕಡತದಿಂದ ತೆಗೆಯುವಂತ ಪದ ಬಳಸಿದ್ರಾ ಮೋದಿ?

ಸಾರಾಂಶ

ಅಪರೂಪದ ಪ್ರಕರಣಕ್ಕೆ ರಾಜ್ಯಸಭೆ ಸಾಕ್ಷಿ! ಪ್ರಧಾನಿ ಮೋದಿ ಮಾತು ಕಡತದಿಂದ ಹೊರಕ್ಕೆ! ಬಿಕೆ ಹರಿಪ್ರಸಾದ್ ವಿರುದ್ಧ ಅವಹೇಳನಕಾರಿ ಪದ! ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ವಿಪಕ್ಷಗಳು

ನವದೆಹಲಿ(ಆ.10): ಅಪರೂಪದಲ್ಲಿ ಅಪರೂಪದ ಪ್ರಕರಣ ಎಂಬಂತೆ ಕಾಂಗ್ರೆಸ್ ಹಿರಿಯ ಮುಖಂಡ, ಬಿ.ಕೆ ಹರಿಪ್ರಸಾದ್ ಕುರಿತು ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಯನ್ನು ರಾಜ್ಯಸಭೆಯ ಕಡತದಿಂದ ಅಳಿಸಿ ಹಾಕಲಾಗಿದೆ.

ನಿನ್ನೆ ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿ ಕೆ ಹರಿಪ್ರಸಾದ್ ಎನ್ ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ಅವರ ವಿರುದ್ಧ ಸೋತಿದ್ದರು. ಹರಿವಂಶ್ ಸುಲಭ ಗೆಲುವಿನ ನಂತರ ಸದನದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಹರಿವಂಶ್ ಅವರಿಗೆ ಅಭಿನಂದನೆ ಹೇಳಿದ್ದರು.

ಇಂದಿನ ಚುನಾವಣೆ ಇಬ್ಬರು ಹರಿಗಳ ನಡುವಿನದಾಗಿತ್ತು ಎಂದು ಹೇಳಿದ ಪ್ರಧಾನಿ, ನಂತರ ಹರಿಪ್ರಸಾದ್ ಅವರ ಹೆಸರಿನ ಮೊದಲಿಗೆ ಇರುವ ಬಿ ಕೆ ಮೊದಲಕ್ಷರವನ್ನು ಟೀಕಿಸಿ ಮಾತನಾಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್, ಪ್ರಧಾನಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿತ್ತು.

ಪ್ರಧಾನಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದ ಬಿಕೆ ಹರಿಪ್ರಸಾದ್, ಮೋದಿ ತಮ್ಮ ಸ್ಥಾನದ ಮತ್ತು ಸದನದ ಗೌರವಕ್ಕೆ ಚ್ಯುತಿ ತಂದಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಬಿಕೆ ಹರಿಪ್ರಸಾದ್ ಅವರ ಹೆಸರಿನ ಬಗ್ಗೆ ಮಾತನಾಡಿದ್ದ ಪ್ರಧಾನಿ ಮಾತುಗಳನ್ನು ಕಡತದಿಂದ ತೆಗೆದುಹಾಕಲಾಗಿದೆ ಎಂದು ರಾಜ್ಯಸಭೆಯ ಕಾರ್ಯದರ್ಶಿಗಳು ಖಚಿತಪಡಿಸಿದ್ದಾರೆ.

ಪ್ರಧಾನಿಯವರು ಸದನದಲ್ಲಿ ಮಾತನಾಡಿದ ಮಾತುಗಳನ್ನು ಅಳಿಸಿಹಾಕಿರುವುದು ಅಪರೂಪದ ಪ್ರಕರಣ. 2013ರಲ್ಲಿ ಇದೇ ರೀತಿ ಸದನದಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಹಿರಿಯ ಸಚಿವ ಅರುಣ್ ಜೇಟ್ಲಿ ನಡುವಿನ ವಾಗ್ವಾದದ ಅಸಮಂಜಸ ಮಾತುಗಳನ್ನು ಕಡತಗಳಿಂದ ತೆಗೆದುಹಾಕಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಸಕ ಬೈರತಿಗೆ ಕಂಟಕವಾದ ಕುಂಭಮೇಳ ಯಾತ್ರೆ!
ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?