
ತಿರುವನಂತಪುರ[ಆ.18] ಕೇರಳದಲ್ಲಿ ಕಳೆದ ಒಂಭತ್ತು ದಿನಗಳಿಂದ ಎಡಬಿಡದೇ ಸುರಿಯುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಉನ್ನತ ಮಟ್ಟದ ತನಿಖೆ ನಡೆಸಿದ ಬಳಿಕ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ನಡೆಸಿದ್ದಾರೆ.
ಕೇರಳದಲ್ಲಿ ಹಾನಿಗೊಳಗಾದ ಪ್ರದೇಶಗಳ ಪೈಕಿ ಎರ್ನಾಕುಲಂ, ತ್ರಿಶೂರ್ ಜಿಲ್ಲೆಗಳ ಕೆಲ ಭಾಗಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಹವಾಮಾನ ವೈಪರಿತ್ಯದಿಂದ ವೈಮಾನಿಕ ಸಮೀಕ್ಷೆ ನಡೆಸುವುದು ಅಸಾಧ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು.
ಕೇರಳದಲ್ಲಿ 400ಲ್ಲೀ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದು ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ದೇಶದ ಹಲವು ಭಾಗಗಳಿಂದ ಪರಿಹಾರ ಹರಿದು ಬರುತ್ತಿದ್ದು ಸೇನಾ ಪಡೆಗಳು ಪರಿಹಾರ ಕಾರ್ಯದಲ್ಲಿ ನಿರತವಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.