
ದೀಸಪುರ್(ಡಿ.05): ದೇಶದ ಅತೀ ಉದ್ದದ ರೈಲು ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇದೇ ಡಿ.25ರಂದು ಉದ್ಘಾಟಿಸಲಿದ್ದಾರೆ. ಅರುಣಾಚಲಪ್ರದೇಶ ಮತ್ತು ಅಸ್ಸಾಂ ನಡುವೆ ಬ್ರಹ್ಮಪುತ್ರ ನದಿ ಮೇಲೆ ಈ ರೈಲು ಸೇತುವೆಯನ್ನು ನಿರ್ಮಿಸಲಾಗಿದೆ.
ಡಿ.25 ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವಾಗಿದ್ದು, ಈ ದಿನವನ್ನು ಸರ್ಕಾರ ‘ಗುಡ್ ಗರ್ವನನ್ಸ್ ಡೇ’ ಆಗಿ ಆಚರಿಸುತ್ತಿದೆ. ಇದೇ ಹಿನ್ನೆಲೆಯಲ್ಲಿ ದೇಶದ ಅತೀ ಉದ್ದದ ರೈಲು ಸೇತುವೆಯನ್ನು ಮೋದಿ ಈ ದಿನದಂದೇ ಉದ್ಘಾಟಿಸಲಿದ್ದಾರೆ.
ಒಟ್ಟು 4.9 ಕಿ.ಮೀ ಉದ್ದದ ಈ ರೈಲು ಸೇತುವೆ ಅಸ್ಸಾಂ ಮತ್ತು ಅರುಣಾಚಲಪ್ರದೇಶದ ನಡುವಿನ ಬೋಗಿಬೀಲ್ ಬಳಿ ನಿರ್ಮಿಸಲಾಗಿದ್ದು, ಇದೇ ಕಾರಣಕ್ಕೆ ಈ ಸೇತುವೆಗೆ ಬೋಗಿಬೀಲ್ ಸೇತುವೆ ಎಂದೇ ಹೆಸರಿಸಲಾಗಿದೆ.
ಬೋಗಿಬೀಲ್ ರೈಲು ಸೇತುವೆ ನಿರ್ಮಿಸಲು ಮಾಜಿ ಪ್ರಧಾನಿ ದೇವೇಗೌಡ ಅವರ ಆಡಳಿತದ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ಈ ರೈಲು ಸೇತುವೆಗೆ ಹಣವನ್ನೂ ಮೀಸಲಿಡಲಾಗಿತ್ತು. ಮುಂದೆ ಮಾಜಿ ಪ್ರಧಾನಿ ಅಡಲ್ ಬಿಹಾರಿ ವಾಜಪೇಯಿ ಇದರ ಶಂಕುಸ್ಥಾಪನೆ ನೆರವೇರಿಸಿದ್ದರು.
ಇದೀಗ ಪ್ರಧಾನಿ ನರೇಂದ್ರ ಮೋದಿ ಈ ಸೇತುವೆಯನ್ನು ಉದ್ಘಾಟಿಸಲಿದ್ದು, ಮಾಜಿ ಪ್ರಧಾನಿ ದೇವೇಗೌಡರು ಅನುಮೋದಿಸಿದ್ದ ಎರಡನೇ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದಂತಾಗುತ್ತದೆ. ಈ ಹಿಂದೆ ದೇವೇಗೌಡರ ಕಾಲದಲ್ಲೇ ಘೋಷಿಸಲಾಗಿದ್ದ ಅಸ್ಸಾಂ ಮತ್ತು ಅರುಣಾಚಲಪ್ರದೇಶವನ್ನು ಸಂಪರ್ಕಿಸುವ ಸುಮಾರು 9 ಕಿ.ಮೀ. ಉದ್ದದ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.