
ನವದೆಹಲಿ: ಸ್ವಚ್ಛ ಭಾರತ ಆಂದೋಲ ನದ ಹರಿಕಾರರಾದ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 15 ರಿಂದ ‘ಸ್ವಚ್ಛತೆಯೇ ಸೇವೆ’ (ಸ್ವಚ್ಛ ತಾ ಹೀ ಸೇವಾ ಹೈ) ಆಂದೋಲನವನ್ನು ಅರಂಭಿಸಲು ನಿರ್ಧರಿಸಿದ್ದಾರೆ. ಮಹಾತ್ಮಾ ಗಾಂಧೀಜಿ ಅವರ 150 ನೇ ಜನ್ಮದಿನದ ಹಿನ್ನೆಲೆಯಲ್ಲಿ ಮೋದಿ ಅವರು ಹೊಸ ಆಂದೋಲನಕ್ಕೆ ಕರೆ ನೀಡಿದ್ದಾರೆ.
‘ಸ್ವಚ್ಛ ಭಾರತಕ್ಕೆ ಶ್ರಮಿಸಿದವರ ಜತೆ ಇದೇ ಶನಿವಾರ ಸಂವಾದ ನಡೆಸಲು ಬಯಸಿರುವೆ. ಇದಾದ ನಂತರ ಸ್ವಚ್ಛತೆಯೇ ಸೇವೆ ಆಂದೋಲನ ಆರಂಭವಾಗಲಿದೆ. ಸ್ವಚ್ಛತೆಯೇ ಸೇವೆ ಆಂದೋಲವನ್ನು ಮಹಾತ್ಮಾ ಗಾಂಧೀಜಿ ಅವರಿಗೆ ನೀಡುವ ಬಹುದೊಡ್ಡ ಶ್ರದ್ಧಾಂಜಲಿ’ ಎಂದು ಬುಧವಾರ ವಿಡಿಯೋ ಸಂದೇಶವೊಂದರಲ್ಲಿ ಮೋದಿ ಹೇಳಿದ್ದಾರೆ.
‘ಅಕ್ಟೋಬರ್ 2 ಮಹಾತ್ಮಾ ಗಾಂಧೀಜಿ ಅವರ 150 ನೇ ಜನ್ಮದಿನವಾಗಿದ್ದು, ಅಂದಿಗೆ ಸ್ವಚ್ಛ ಭಾರತ ಆಂದೋಲನ 4 ವರ್ಷ ಪೂರೈಸಲಿದೆ. ಬಾಪು ಅವರ ಸ್ವಚ್ಛ ಭಾರತದ ಕನಸು ಸಾಕಾರಗೊಳಿಸಲು ಕೈಗೊಂಡ ಐತಿಹಾಸಿಕ ಜನಾಂದೋಲನವದು’ ಎಂದೂ ಮೋದಿ ಬಣ್ಣಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.