ರಾಷ್ಟ್ರಪತಿ ಚುನಾವಣೆಯಲ್ಲೂ ಕಾವೇರಿ ಎಳೆದು ತಂದ ತಮಿಳು ಪಕ್ಷಗಳು

Published : Jul 01, 2017, 01:29 AM ISTUpdated : Apr 11, 2018, 12:48 PM IST
ರಾಷ್ಟ್ರಪತಿ ಚುನಾವಣೆಯಲ್ಲೂ ಕಾವೇರಿ ಎಳೆದು ತಂದ ತಮಿಳು ಪಕ್ಷಗಳು

ಸಾರಾಂಶ

ಕಳೆದ ವರ್ಷದ ಬರಗಾಲ ತಮಿಳುನಾಡನ್ನು ಬಾಧಿಸಿದೆ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚೆನ್ನೈ(ಜು.01): ರಾಷ್ಟ್ರಪತಿ ಚುನಾವಣೆಯಲ್ಲೂ ಕಾವೇರಿ ವಿವಾದವನ್ನು ತಮಿಳುನಾಡಿನ ರಾಜಕೀಯ ಪಕ್ಷಗಳು ಎಳೆದು ತಂದಿವೆ. ‘ಒಂದು ತಿಂಗಳಲ್ಲೇ ಕಾವೇರಿ ನಿರ್ವಹಣಾ ಮಂಡಳಿಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಚಿಸಬೇಕು. ಆಗ ಮಾತ್ರ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ ಕೋವಿಂದ್‌ಗೆ ನಾವು ಬೆಂಬಲ ನೀಡುತ್ತೇವೆ’ ಎಂದು ಪಿಎಂಕೆ ಅಧ್ಯಕ್ಷ ಎಸ್. ರಾಮದಾಸ್ ಷರತ್ತು ವಿಧಿಸಿದ್ದಾರೆ. ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಕಳೆದ ವರ್ಷದ ಬರಗಾಲ ತಮಿಳುನಾಡನ್ನು ಬಾಧಿಸಿದೆ. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 10 ಕುರುವೈ ಬೆಳೆಗಳಲ್ಲಿ 3 ಬೆಳೆ ಮಾತ್ರ ತೆಗೆಯಲಾಗಿದೆ. ಇದಕ್ಕೆ ಕಾರಣ ಕಾವೇರಿ ವಿವಾದ ಕೂಡ ಒಂದು. ಈವರೆಗೂ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ವಿಫಲವಾಗಿದೆ’ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!