ಪಿಎನ್‌ಬಿ ವಂಚನೆ: ಎಸ್‌ಐಟಿ ತನಿಖೆಗೆ ಕೇಂದ್ರದ ವಿರೋಧ

Published : Feb 22, 2018, 10:15 AM ISTUpdated : Apr 11, 2018, 12:42 PM IST
ಪಿಎನ್‌ಬಿ ವಂಚನೆ: ಎಸ್‌ಐಟಿ ತನಿಖೆಗೆ ಕೇಂದ್ರದ ವಿರೋಧ

ಸಾರಾಂಶ

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ 11400 ಕೋಟಿ ರು.ಹಗರಣ ಪ್ರಕರಣ ಸಂಬಂಧ ಎಸ್‌ಐಟಿಯಿಂದ ಸ್ವತಂತ್ರ ತನಿಖೆ ನಡೆಸುವುದಕ್ಕೆ ಕೇಂದ್ರ ಸರ್ಕಾರ ತನ್ನ ಆಕ್ಷೇಪ ವ್ಯಕ್ತಪಡಿಸಿದೆ.

ನವದೆಹಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ 11400 ಕೋಟಿ ರು.ಹಗರಣ ಪ್ರಕರಣ ಸಂಬಂಧ ಎಸ್‌ಐಟಿಯಿಂದ ಸ್ವತಂತ್ರ ತನಿಖೆ ನಡೆಸುವುದಕ್ಕೆ ಕೇಂದ್ರ ಸರ್ಕಾರ ತನ್ನ ಆಕ್ಷೇಪ ವ್ಯಕ್ತಪಡಿಸಿದೆ.

ಹಗರಣ ಕುರಿತು ಎಸ್‌ಐಟಿ ತನಿಖೆ ನಡೆಸಬೇಕು ಮತ್ತು ಆಭರಣ ಉದ್ಯಮಿ ನೀರವ್‌ ಮೋದಿ ಗಡಿಪಾರು ನಡೆಸುವಂತೆ ವಿನಂತಿಸಿ ವಕೀಲ ವಿನೀತ್‌ ಧಂಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರದ ಪರವಾಗಿ ಹಾಜರಾಗಿದ್ದ ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌, ಪ್ರಕರಣದ ಕುರಿತು ಈಗಾಗಲೇ ವಿವಿಧ ತನಿಖಾ ಸಂಸ್ಥೆಗಳು ಕೇಸು ದಾಖಲಿಸಿ, ತನಿಖೆ ನಡೆಸುತ್ತಿವೆ.

ಈ ಹಂತದಲ್ಲಿ ಮತ್ತೊಂದು ತನಿಖೆಯ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದರು. ವಾದ ಆಲಿಸಿದ ಸಿಜೆಐ ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠ, ಮುಂದಿನ ವಿಚಾರಣೆ ಮಾ. 16ಕ್ಕೆ ನಿಗದಿಪಡಿಸಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾತ್ರಿ ಕಣ್ಣೇ ಕಾಣೊಲ್ಲವೆಂದು ಹಗಲಿನಲ್ಲಿಯೇ ಕಿರುತೆರೆ ನಟ ಪ್ರವೀಣ್ ಮನೆಗೆ ಕನ್ನ ಹಾಕಿದ ಇರುಳು ಕುರುಡ!
ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ