ಹೆಸರಾಂತ ಕವಿ ದಂಪತಿಯನ್ನು ತಡೆದ ಪೊಲೀಸರು..ಸಾಹಿತ್ಯ ಸಮ್ಮೇಳನದಲ್ಲಿ ಇದೇನು?

Published : Jan 04, 2019, 09:48 PM ISTUpdated : Jan 04, 2019, 09:54 PM IST
ಹೆಸರಾಂತ ಕವಿ ದಂಪತಿಯನ್ನು ತಡೆದ ಪೊಲೀಸರು..ಸಾಹಿತ್ಯ ಸಮ್ಮೇಳನದಲ್ಲಿ  ಇದೇನು?

ಸಾರಾಂಶ

ಧಾರವಾಡದಲ್ಲಿ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಆದರೆ ಸಮ್ಮೇಳನಕ್ಕೆ ಕನ್ನಡದ ಹೆಸರಾಂತ ಕವಿ, ಸಾಹಿತಿಗಳನ್ನು ಆಹ್ವಾನಿಸಲಾಗಿಲ್ಲ ಎಂಬ ದೂರು ಸಹ ಕೇಳಿ ಬಂದಿದೆ.

ಧಾರವಾಡ[ಜ.04]  ಸಮ್ಮೇಳನಕ್ಕೆ ತಮಗೆ ಆಹ್ವಾನಿಸದೇ ಕಸಾಪದವರು ತಮಗೆ ಅಗೌರವ ತೋರಿದ್ದಾರೆಂದು ಸಾಹಿತಿ, ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ ಹಾಗೂ ಹೇಮಾ ಪಟ್ಟಣಶೆಟ್ಟಿ ದಂಪತಿ ಕಸಾಪ ಮತ್ತು ಮನು ಬಳಿಗಾರ್ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆ ಬಳಿಯೇ ತಮ್ಮ ಅಸಮಾಧಾನ ಹೊರಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯ ವೇದಿಕೆ ಬಳಿ ಪಾಸ್ ಇಲ್ಲದ್ದರಿಂದ ಪಟ್ಟಣಶೆಟ್ಟಿ ದಂಪತಿಗಳನ್ನು ಪೊಲೀಸರು ತಡೆದರು.
ಆಗ ತಮಗೆ ಸೌಜನ್ಯಕ್ಕೂ ಆಯೋಜಕರು ಪಾಸ್ ನೀಡಿಲ್ವೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಾ ಹೊರಗೆ ಹೊರಟಿದ್ದರು. ಇದನ್ನು ಕಂಡ ಮನು ಬಳಿಗಾರ್  ವೇದಿಕೆ ಇಳಿದು ಬಂದು ಕ್ಷಮೆ ಕೇಳಿ ಕರೆದುಕೊಂಡು ಹೋದರು.

ಧಾರವಾಡದಲ್ಲಿ ಚಂದ್ರಶೇಖರ ಕಂಬಾರ್ ಸರ್ವಾಧ್ಯಕ್ಷತೆಯಲ್ಲಿ ಕನ್ನಡ ಹಬ್ಬ ನಡೆಯುತ್ತಿದೆ. ರಾಜ್ಯ ಮಾತ್ರವಲ್ಲದೇ ದೇಶ ವಿದೇಶಗಳಿಂದಲೂ ಕನ್ನಡಿಗರೂ ಆಗಮಿಸಿದ್ದು ಸಾಹಿತ್ಯದ ಚಿಂತನ-ಮಂಥನ ನಡೆಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನ್ಮ ದಿನದಲ್ಲಿ ಒಮ್ಮೆಯಾದ್ರೂ ಸಂಖ್ಯೆ 1 ಇದ್ಯಾ? ಹಾಗಿದ್ದರೆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ- ಎಷ್ಟು ಬಾರಿ ಇದ್ದರೆ ಏನು ಫಲ?
ಅತಿಹೆಚ್ಚು ಮದ್ಯಪಾನ ಮಾಡುವ ಜಗತ್ತಿನ ಸೈನ್ಯ ಯಾವುದು? ಭಾರತದ ಸೇನೆಗೆ ಎಷ್ಟನೇ ಸ್ಥಾನ?