
ಬೆಳಗಾವಿ(ಜ.15): ಜನವರಿ 1 ರಂದು ವಿವೇಕ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದ ರಾಜು ಕಾಗೆ ಬೆಂಬಲಿಗರಿಗೆ, ಪರಾರಿಯಾಗಲು ಸಹಾಯ ಮಾಡಿದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೊಸ ವರ್ಷದಂದು ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಾಗವಾಡ ಗ್ರಾಮದಲ್ಲಿ ಬಿಜೆಪಿ ಶಾಸಕ ರಾಜು ಕಾಗೆ ಬೆಂಬಲಿಗರು, ವಿವೇಕ್ ಶೆಟ್ಟಿ ಮೇಲೆ ಗೂಂಡಾಗಿರಿ ನಡೆಸಿದ್ರು. ಈ ಹಿನ್ನೆಲೆ ಜ.9ರಂದು FIR ದಾಖಲಾಗುತ್ತಿದ್ದಂತೆ, ಶಾಸಕ ರಾಜು ಸೇರಿ 13 ಜನ ಆರೋಪಿಗಳು ಪರಾರಿಯಾಗಿದ್ದರು. ಕಾಗವಾಡ ಪೊಲೀಸರು ಗೂಂಡಾಗಿರಿ ನಡೆಸಿದ್ದ ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದರು. ವಿಪರ್ಯಾಸ ಎಂದರೆ ಹೊಡೆದವರನ್ನು ಬಿಟ್ಟು, ನೋಡಿದವರನ್ನು ಆರೋಪಿಗಳು ಎಂದು ವಶಕ್ಕೆ ಪಡೆದ ಪೊಲೀಸರು ರವೀಂದ್ರ , ಮಲಗೊಂಡ ಪಾಟೀಲ್, ಶಂಕರ್, ನಾಂದಣಿರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇವರೆಲ್ಲಾ ರಾಜು ಕಾಗೆ ಸ್ನೇಹಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ನಿಜವಾದ ಆರೋಪಿಗಳನ್ನು ಹಿಡಿಯುವ ಬದಲು, ಆರೋಪಿಗಳ ಪರಾರಿಗೆ ಸಹಾಯ ಮಾಡಿದ್ದರೆಂದು ಯಾರನ್ನೋ ಹಿಡಿದು, ಪ್ರಕರಣದ ದಾರಿಯನ್ನೇ ಬದಲಾಯಿಸುವ ಪ್ರಯತ್ನ ಇಲ್ಲಿ ನಡೆಯುತ್ತಿರಬಹುದೆಂಬ ಅನುಮಾನ ಕೂಡ ವ್ಯಕ್ತವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.