ಕೊಡಗಿನ ದಿಡ್ಡಳ್ಳಿ ನಿರಾಶ್ರಿತರ ಗುಡಿಸಲಿನತ್ತ ಗುಂಡು ಹಾರಿಸಿದ ವ್ಯಕ್ತಿ ಬಂಧನ

Published : Apr 12, 2017, 04:48 PM ISTUpdated : Apr 11, 2018, 01:02 PM IST
ಕೊಡಗಿನ ದಿಡ್ಡಳ್ಳಿ ನಿರಾಶ್ರಿತರ ಗುಡಿಸಲಿನತ್ತ ಗುಂಡು ಹಾರಿಸಿದ ವ್ಯಕ್ತಿ ಬಂಧನ

ಸಾರಾಂಶ

ಕೊಡಗಿನ ದಿಡ್ಡಳ್ಳಿಯಲ್ಲಿ ನಿರಾಶ್ರಿತರ ಗುಡಿಸಲಿನತ್ತ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಸಿದ್ದಾಪುರ ಪೊಲೀಸರು ಬುಧವಾರ ಸಂಜೆ ಬಂಧಿಸಿದ್ದಾರೆ.

ಮಡಿಕೇರಿ (ಏ.12): ಕೊಡಗಿನ ದಿಡ್ಡಳ್ಳಿಯಲ್ಲಿ ನಿರಾಶ್ರಿತರ ಗುಡಿಸಲಿನತ್ತ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಸಿದ್ದಾಪುರ ಪೊಲೀಸರು ಬುಧವಾರ ಸಂಜೆ ಬಂಧಿಸಿದ್ದಾರೆ.

ಗೂಡ್ಲೂರಿನ ಪೂಣಚ್ಚ (50) ಬಂಧಿತ ಆರೋಪಿ. ಈತ ವೈಯಕ್ತಿಕ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ. ಸೋಮವಾರ ರಾತ್ರಿ ದಿಡ್ಡಳ್ಳಿಯ ಆಶ್ರಮ ಶಾಲೆ ಆವರಣದಲ್ಲಿರುವ ನಿರಾಶ್ರಿತರ ಗುಡಿಸಲಿನತ್ತ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಈ ವೇಳೆ ಎಚ್ಚರಗೊಂಡ ಅಲ್ಲಿನ ನಿವಾಸಿ ಬಸವ ಎಂಬವರು ಟಾರ್ಚ್‌ಲೈಟ್ ಬಿಟ್ಟು ಯಾರೆಂದು ನೋಡಲು ಯತ್ನಿಸಿದಾಗ ಅವರ ಮೇಲೂ ಗುಂಡು ಹಾರಿಸಿದ್ದರು. ಈ ವೇಳೆ ಕೂದಲೆಳೆ ಅಂತರದಿಂದ ಗುಂಡೇಟಿನಿಂದ ತಪ್ಪಿಸಿಕೊಂಡ ಬಸವ ತಕ್ಷಣ ಸಿದ್ದಾಪುರ ಪೊಲೀಸರಿಗೆ ದೂರು ನೀಡಿದ್ದರು. ಬಂಧಿತ ಆರೋಪಿ ಪೂಣಚ್ಚ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. 

ಅಪ್ಪಣ್ಣ, ಮಣಿ, ದೇಚು ಎಂಬ ಮೂವರು ಆದಿವಾಸಿ ಕಾರ್ಮಿಕರಿಗೆ ಕೂಲಿ ಕೆಲಸಕ್ಕಾಗಿ ಮುಂಗಡ ಹಣ ನೀಡಿದ್ದ ಪೂಣಚ್ಚ ಅವರು ಕೆಲಸಕ್ಕೆ ಬಾರದಿದ್ದಾಗ ಜಗಳವಾಡಿದ್ದ. ಹೀಗಾಗಿ, ಪೂಣಚ್ಚ ವಿರುದ್ಧ ಆದಿವಾಸಿಗಳು ತಿರುಗಿಬಿದ್ದಿದ್ದರು. ಆ ಮೂವರ ಮೇಲಿನ ಸಿಟ್ಟಿನಿಂದ ಸೋಮವಾರ ರಾತ್ರಿ ಮದ್ಯ ಸೇವಿಸಿ ಬಂದ ಆರೋಪಿ ಗುಂಡುಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!
ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು