ಮಡಿಕೇರಿಯಲ್ಲಿ ಚೇಸಿಂಗ್ ಮಾಡಿದ ಪೊಲೀಸರು ಬದುಕಿದ್ದೇ ಹೆಚ್ಚು..!

Published : May 13, 2017, 12:26 AM ISTUpdated : Apr 11, 2018, 01:09 PM IST
ಮಡಿಕೇರಿಯಲ್ಲಿ ಚೇಸಿಂಗ್ ಮಾಡಿದ ಪೊಲೀಸರು ಬದುಕಿದ್ದೇ ಹೆಚ್ಚು..!

ಸಾರಾಂಶ

ಡಿಕ್ಕಿ ಹೊಡೆದರೂ ಸಾವರಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋವುಗಳನ್ನ ರಕ್ಷಿಸಿ ಟಿಟಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.  ಮಂಗಳೂರು ಮೂಲದ ಷರೀಫ್ ಮತ್ತು ಮನ್ಸೂರ್ ಬಂಧಿತ ಆರೋಪಿಗಳಾಗಿದ್ದಾರೆ.

ಮಡಿಕೇರಿ(ಮೇ 13): ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದವರನ್ನ ಪೋಲೀಸರು ಸಿನಿಮೀಯ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ ಘಟನೆ  ಕೊಡಗು ಜಿಲ್ಲೆಯ ಶನಿವಾರ ಸಂತೆಯ ಕೊಡ್ಲಿಪೇಟೆಯಲ್ಲಿ ನಡೆದಿದೆ. ಕಳೆದ ರಾತ್ರಿ  8 ಗೋವುಗಳನ್ನು ಟಿಟಿ ವಾಹನದಲ್ಲಿ  ಮಂಗಳೂರಿಗೆ ಸಾಗಿಸಲಾಗುತ್ತಿತ್ತು.  ಬೀಟ್'ನಲ್ಲಿದ್ದ ಪೊಲೀಸರು ಬೈಕ್'​ನಲ್ಲಿ ಟಿಟಿ ವಾಹನವನ್ನ ಚೇಸ್ ಮಾಡಲು ಹೊರಟಿದ್ದಾರೆ. ಆಗ ಆರೋಪಿಗಳು ಟಿಟಿಯಿಂದ ಬೈಕ್'ಗೆ ಡಿಕ್ಕಿ ಹೊಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ತತ್'ಪರಿಣಾಮವಾಗಿ ಬೈಕ್ ಬಹುತೇಕ ನಜ್ಜುಗುಜ್ಜಾಗಿದೆ. ಪೊಲೀಸರು ಅದೃಷ್ಟವಶಾತ್ ಬಚಾವಾಗಿದ್ದಾರೆ.

ಡಿಕ್ಕಿ ಹೊಡೆದರೂ ಸಾವರಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋವುಗಳನ್ನ ರಕ್ಷಿಸಿ ಟಿಟಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಕೊಡ್ಲಿಪೇಟೆ ಮತ್ತು ಕುಶಾಲನಗರದಿಂದ ಈ ಗೋವುಗಳನ್ನು ಪಡೆದು ಮಂಗಳೂರಿಗೆ ಸಾಗಿಸಲಾಗುತ್ತಿತ್ತು.  ಮಂಗಳೂರು ಮೂಲದ ಷರೀಫ್ ಮತ್ತು ಮನ್ಸೂರ್ ಬಂಧಿತ ಆರೋಪಿಗಳಾಗಿದ್ದಾರೆ. ರಕ್ಷಿಸಲಾದ ಎಂಟು ಗೋವುಗಳನ್ನು ಕೊಡ್ಲಿಪೇಟೆಯಲ್ಲಿ ಸುರಕ್ಷಿತವಾಗಿಡಲಾಗಿದೆ.

ಇದೇ ವೇಳೆ, ಇಂದು ಪೋಲೀಸರು ವಶಕ್ಕೆ ಪಡೆದಿದ್ದ ಟಿಟಿ ವಾಹನಕ್ಕೆ ಸ್ಥಳೀಯರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿದ್ದಾರೆ. ಈ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌
ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ