ರಾಜ್ಯದಲ್ಲಿ ಪೇದೆಗಳ ಟೋಪಿ ಬದಲಾವಣೆ?

Published : Aug 05, 2018, 08:40 AM IST
ರಾಜ್ಯದಲ್ಲಿ ಪೇದೆಗಳ ಟೋಪಿ ಬದಲಾವಣೆ?

ಸಾರಾಂಶ

ಮತ್ತೆ ಟೋಪಿ ವಿಚಾರ ಮುನ್ನಲೆಗೆ ಬಂದಿದೆ. ಅಲ್ಲದೆ, ಇನ್ನೂ ಹೆಚ್ಚಿನ ಗುಣಮಟ್ಟವುಳ್ಳ ಸಮವಸ್ತ್ರಗಳನ್ನು ನೀಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಸದ್ಯದಲ್ಲೆ ಪೊಲೀಸ್ ಪೇದೆಗಳಿಗೆ ಹೊಸ ಮಾದರಿಯ ಪಿ-ಕ್ಯಾಪ್ ಧರಿಸಲು ಅವಕಾಶ ಕಲ್ಪಿಸಬಹುದು ಎನ್ನಲಾಗಿದೆ. 

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಮಿಳುನಾಡು ಪೊಲೀಸರ ಮಾದರಿಯಲ್ಲಿ ಕಾನ್‌ಸ್ಟೇಬಲ್‌ಗಳು ಧರಿಸುವ ಸಮವಸ್ತ್ರ ಮತ್ತು ಟೋಪಿ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ನೃಪತುಂಗ ರಸ್ತೆಯ ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ, ಪೊಲೀಸರ ಟೋಪಿ ಬದಲಾವಣೆ ಸಂಗತಿ ಕುರಿತು ಸಮಾಲೋಚನೆ ನಡೆದಿದೆ.

ಕಾನ್‌ಸ್ಟೇಬಲ್‌ಗಳು ಸ್ಲೊಚಾಟ್ ಕ್ಯಾಪ್ ಧರಿಸುತ್ತಿರುವುದರಿಂದ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಕೆಲವು ಅಧ್ಯಯನ ವರದಿಗಳು ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ  ಇಲಾಖೆಯು, ತಮಿಳುನಾಡು ಮಾದರಿಯಲ್ಲಿ ಪಿ-ಕ್ಯಾಪ್ ಬಳಕೆಗೆ ಚಿಂತನೆ ನಡೆಸಿತ್ತು. ಅಲ್ಲದೆ  ಡಾ.ಜಿ.ಪರಮೇಶ್ವರ್ ಅವರು ಮೊದಲ ಬಾರಿ ಗೃಹ ಸಚಿವರಾಗಿದ್ದಾಗ ಸಹ ಪೊಲೀಸರ ಟೋಪಿ ಬದಲಾವಣೆಗೆ ಒಲವು ವ್ಯಕ್ತಪಡಿಸಿದ್ದರು. 

ಆದರೆ  ಆನಂತರ ಕೆಲ ದಿನಗಳ ಚರ್ಚೆ ನಡೆದು ತಣ್ಣಗಾಯಿತು. ಈಗ ಮತ್ತೆ ಟೋಪಿ ವಿಚಾರ ಮುನ್ನಲೆಗೆ ಬಂದಿದೆ. ಅಲ್ಲದೆ, ಇನ್ನೂ ಹೆಚ್ಚಿನ ಗುಣಮಟ್ಟವುಳ್ಳ ಸಮವಸ್ತ್ರಗಳನ್ನು ನೀಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಸದ್ಯದಲ್ಲೆ ಪೊಲೀಸ್ ಪೇದೆಗಳಿಗೆ ಹೊಸ ಮಾದರಿಯ ಪಿ-ಕ್ಯಾಪ್ ಧರಿಸಲು ಅವಕಾಶ ಕಲ್ಪಿಸಬಹುದು ಎನ್ನಲಾಗಿದೆ. ಅಲ್ಲದೆ, ಡಿಜಿಪಿ ಕಚೇರಿಯಲ್ಲಿ ಪ್ರಾಯೋಗಿಕವಾಗಿ ಪಿ-ಕ್ಯಾಪ್ ಧರಿಸಿರುವ ಪೋಟೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.

ಕಾನೂನು ಪ್ರಕಾರ ಪೊಲೀಸ್ ಸಮವಸ್ತ್ರ ಅಥವಾ ಟೋಪಿ ಬದಲಾವಣೆ ಬಗ್ಗೆ ಇಲಾಖೆ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ಇದಕ್ಕಾಗಿ ಪೊಲೀಸ್ ಕಾಯ್ದೆ ತಿದ್ದುಪಡಿ ಮಾಡಬೇಕಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಬಹುದು. ಅಂತಿಮವಾಗಿ ಈ ಸಂಬಂಧ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಕನ್ನಡಪ್ರಭಕ್ಕೆ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌