120 ಅಭ್ಯರ್ಥಿಗಳಿಗೆ ಶಾಶ್ವತ ನಿಷೇಧ

Published : Dec 14, 2018, 08:52 AM IST
120 ಅಭ್ಯರ್ಥಿಗಳಿಗೆ ಶಾಶ್ವತ ನಿಷೇಧ

ಸಾರಾಂಶ

120 ಅಭ್ಯರ್ಥಿಗಳಿಗೆ ಶಾಶ್ವತ ನಿಷೇಧ ಹೇರಿ ಆದೇಶ ನೀಡಲಾಗಿದೆ. ಇತ್ತೀಚೆಗಷ್ಟೇ ನಡೆಯಬೇಕಿದ್ದ ಪರೀಕ್ಷೆಯ ಸೋರಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಹಿನ್ನೆಲೆ ನಿಷೇಧ ವಿಧಿಸಲಾಗಿದೆ.

ಬೆಂಗಳೂರು :  ಇತ್ತೀಚಿಗೆ ಸಿವಿಲ್‌ ಕಾನ್‌ಸ್ಟೇಬಲ್‌ ಹುದ್ದೆ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದ 120 ಅಭ್ಯರ್ಥಿಗಳಿಗೆ ಶಾಶ್ವತವಾಗಿ ಪೊಲೀಸ್‌ ಇಲಾಖೆ ಪರೀಕ್ಷೆ ಬರೆಯದಂತೆ ನಿಷೇಧ ಹೇರಲಾಗಿದೆ.

ಈ ಸಂಬಂಧ ರಾಜ್ಯ ಪೊಲೀಸ್‌ ಇಲಾಖೆಯ ನೇಮಕಾತಿ ಮತ್ತು ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್‌ ನಿರ್ದೇಶಕ ರಾಘವೇಂದ್ರ ಎಚ್‌.ಔರಾದ್ಕರ್‌ ಆದೇಶ ಹೊರಡಿಸಿದ್ದಾರೆ. ನ.25ರಂದು ನಿಗದಿಯಾಗಿದ್ದ ಕಾನ್‌ಸ್ಟೇಬಲ್‌ ಹುದ್ದೆ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. 

ಪ್ರಶ್ನೆ ಪತ್ರಿಕೆ ದಂಧೆಕೋರ ಶಿವಕುಮಾರಯ್ಯನಿಗೆ .8 ಲಕ್ಷ ಕೊಟ್ಟು ಪಡೆದು ಪರೀಕ್ಷೆಗೆ ಅಭ್ಯರ್ಥಿಗಳು ಸಿದ್ದತೆ ನಡೆಸಿದ್ದರು. ಈ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಸಿಸಿಬಿ ಪೊಲೀಸರು, ಪ್ರಶ್ನೆ ಪತ್ರಿಕೆ ಸಮೇತ ಕಿಂಗ್‌ಪಿನ್‌ ಹಾಗೂ ಅಭ್ಯರ್ಥಿಗಳನ್ನು ಬಂಧಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್