
ಬೆಳಗಾವಿ: ನಗರದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಹೊಸಮನಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಮುಂದಾಗಿರುವ ಘಟನೆಗೆ ಸಂಬಂಧಿಸಿದಂತೆ ಸಂಸದ ಸುರೇಶ್ ಅಂಗಡಿ ಅವರು ಜಿಲ್ಲಾ ಪೊಲೀಸರನ್ನು ಕಟುವಾಗಿ ಟೀಕಿಸಿದ್ದಾರೆ.
ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹೆದರುತ್ತಿದ್ದು ಇದಕ್ಕೆ ಶಾಸಕ ಸತೀಶ ಜಾರಕಿಹೊಳಿ ಅವರ ಬೆದರಿಕೆಯೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಹಾಗೂ ಜಿಲ್ಲಾಡಳಿತ ಸುಮ್ಮನೆ ಕುಳಿತಿರುವುದು ಸರಿಯಲ್ಲ.
ಧೈರ್ಯದಿಂದ ಕೆಲಸ ನಿರ್ವಹಿಸಲು ಸಾಧ್ಯವಾಗದಿದ್ದರೆ ಅಂತಹ ಅಧಿಕಾರಿಗಳು ಬೆಳಗಾವಿಯಿಂದ ಜಾಗ ಖಾಲಿ ಮಾಡಲಿ ಎಂದು ಒತ್ತಾಯಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸಿಎಂ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಸಂಸದ ಸುರೇಶ ಅಂಗಡಿ ಎಚ್ಚರಿಕೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.