
ಯಾದಗಿರಿ, [ಅ.19]: ಮಾಜಿ ಶಾಸಕರೊಬ್ಬರು ಪೊಲೀಸ್ ಠಾಣೆಗೆ ಬಂದು ಪೊಲೀಸರಿಗೆ ಆವಾಚ್ ಹಾಕಿದ ಘಟನೆ ಯಾದಗಿರಿ ಜಿಲ್ಲೆ ಸುರಪುರದಲ್ಲಿ ನಡೆದಿದೆ.
ಸುರಪುರದ ಮಾಜಿ ಶಾಸಕ ರಾಜಾವೆಂಕಟಪ್ಪ ನಾಯಕ ಅವರೇ ಪೊಲೀಸರಿಗೆ ಆವಾಜ್ ಹಾಕಿದವರು. ತಾವು ಹೇಳಿದ ಸ್ಥಳಕ್ಕೆ ಬಂದಿಲ್ಲವೆಂದು ಠಾಣೆಗೆ ಬಂದು ಪೊಲೀಸರ ಮೇಲೆಯೇ ರೇಗಾಡಿದ್ದಾರೆ.
ಅಷ್ಟೇ ಅಲ್ಲದೇ ಶಾಸಕರು ಹಿಂಬಾಲಕರು ಪೊಲೀಸರಿಗೆ ಮನಬಂದಂತೆ ಬೈದಿದ್ದಾರೆ. ಈ ಹಿನ್ನಲೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲದೇ ಅವಾಚ್ಯ ಶಬ್ಧ ಬಳಕೆ ಮಾಡಿದಕ್ಕೆ ಪೊಲೀಸರರು ಸ್ವಯಂ ಪ್ರೇರಿತವಾಗಿ ಎಫ್ ಐಆರ್ ದಾಖಲು ಮಾಡಿಕೊಂಡಿದ್ದಾರೆ.
ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸೇರಿ ಒಟ್ಟು 8 ಮಂದಿ ಮೇಲೆ ಎಫ್ ಐಆರ್ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.