
ಉತ್ತರಪ್ರದೇಶ(ಎ.04): ಪೊಲೀಸಪ್ಪನೊಬ್ಬ ಬೇಜವಾಬ್ದಾರಿಯುತವಾಗಿ ನಡೆದುಕೊಂಡು ಪೊಲೀಸ್ ಇಲಾಖೆಯ ಪ್ರತಿಷ್ಟಗೆ ದಕ್ಕೆ ಉಂಟು ಮಾಡಿರುವ ಉತ್ತರ ಪ್ರದೇಶದಲ್ಲಿ ನಡೆದಿದೆ.
ಒಂದೆಡೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುವ ಅಧಿಕಾರಿಗಳನ್ನು ಸರಿ ದಾರಿಗೆ ಕರೆತರಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶ್ರಮಿಸುತ್ತಿದ್ದರೆ ಇತ್ತ ಅಮೇಥಿಯ ಪೊಲೀಸ್ ಅಧಿಕಾರಿಯೊಬ್ಬ ಅಪರಾಧಿಯೊಬ್ಬ ಉದ್ದಟತನ ಮೆರೆದಿದ್ದಾರೆ. ಅಮೇಥಿಯ ಶುಕ್ಲಾ ಬಜಾರ್ ಠಾಣೆಯ ಪೊಲೀಸ್ ಅಧಿಕಾರಿ ಸಂಜಯ್ ಸಿಂಗ್ ಎಂಬಾತ ದೂರು ನೀಡಲು ಬಂದ ಜನರಿಂದ ಮಸಾಜ್ ಮಾಡಿಸಿಕೊಳ್ಳುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸಾಮಾಜಿಕ ಜಾಲಾತಾಣಗಳಲ್ಲಿ ಪೊಲೀಸ್ ಅಧಿಕಾರಿಯ ಈ ದುರ್ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.