ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸುಳಿವು ಸಿಕ್ಕಿದೆ : ಶೀಘ್ರದಲ್ಲೇ ತನಿಖೆ ಪೂರ್ಣ

Published : Sep 09, 2017, 03:57 PM ISTUpdated : Apr 11, 2018, 01:10 PM IST
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸುಳಿವು ಸಿಕ್ಕಿದೆ : ಶೀಘ್ರದಲ್ಲೇ ತನಿಖೆ ಪೂರ್ಣ

ಸಾರಾಂಶ

ಸಭೆಗೆ ಕೆಂಪಯ್ಯ ಅವರನ್ನು ಆಹ್ವಾನಿಸದ ಬಗ್ಗೆ ಸ್ಪಷ್ಟಿಕರಣ ನೀಡಿದ ಅವರು,ಇದೊಂದು ಸಾಮಾನ್ಯ ಸಭೆ. ಇದಕ್ಕೆ ಸಲಹೆಗಾರರ ಅವಶ್ಯಕತೆ ಏನಿರುತ್ತದೆ. ನಾನು ಕುಮಾರಸ್ವಾಮಿ, ಅಶೋಕ್ ಸೇರಿದಂತೆ ಎಲ್ಲರ ಸಲಹೆ ಪಡೆಯುತ್ತೇನೆ.

ಬೆಂಗಳೂರು(ಸೆ.09): ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳಿವು ದೊರೆತಿದೆ ಎಂದು ಗೃಹ ಸಚಿವ  ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಅಧಿಕಾರಿಗಳ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಆದಷ್ಟು ಬೇಗ ತನಿಖೆ ಪೂರ್ಣಗೊಳ್ಳಲಿದೆ. ಸಮರ್ಥ ಅಧಿಕಾರಿಗಳ ತಂಡ ತನಿಖೆ ನಡೆಸುತ್ತಿದೆ. ನಿವೃತ್ತ ಐಎಎಸ್ ಅಧಿಕಾರಿ ಜಾಮ್ ದಾರ್ ಅವರಿಗೆ ಬೆದರಿಕೆ ಇದೆ ಎಂಬ ಮಾಹಿತಿ ಬಂದಿದೆ. ಅವರಿಗೆ ಭದ್ರತೆ ಒದಗಿಸುತ್ತೇವೆ. ವಿಚಾರವಾದಿಗಳು ಯಾರೆ ಕೇಳಿದರೂ ಭದ್ರತೆ ಕೊಡುತ್ತೇವೆ ಎಂದು ತಿಳಿಸಿದರು.

ಸಭೆಗೆ ಕೆಂಪಯ್ಯ ಅವರನ್ನು ಆಹ್ವಾನಿಸದ ಬಗ್ಗೆ ಸ್ಪಷ್ಟಿಕರಣ ನೀಡಿದ ಅವರು,ಇದೊಂದು ಸಾಮಾನ್ಯ ಸಭೆ. ಇದಕ್ಕೆ ಸಲಹೆಗಾರರ ಅವಶ್ಯಕತೆ ಏನಿರುತ್ತದೆ. ನಾನು ಕುಮಾರಸ್ವಾಮಿ, ಅಶೋಕ್ ಸೇರಿದಂತೆ ಎಲ್ಲರ ಸಲಹೆ ಪಡೆಯುತ್ತೇನೆ.ಅವಶ್ಯಕತೆ ಇದ್ದಾಗ ಕೆಂಪಯ್ಯ ಅವರ ಸಲಹೆ ಪಡೆಯುತ್ತೇನೆ. ನಾನು ಸುಮಾರು 35 ವರ್ಷ ರಾಜಕಾರಣದಲ್ಲಿ ಇದ್ದೇನೆ. ಅಧಿಕಾರ ನಡೆಸುವ ಸಾಮರ್ಥ್ಯ ನನಗೂ ಇದೆ' ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌