
ಬೆಂಗಳೂರು(ಫೆ.07): ಬೆಂಗಳೂರಲ್ಲಿ ಕಡಬಗೆರೆ ಸೀನನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಪರ ಹೋರಾಟಗಾರ ಅಗ್ನಿ ಶ್ರೀಧರ್'ರವರ ಕುಮಾರಸ್ವಾಮಿ ಲೇಔಟ್ನಲ್ಲಿರುವ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ಪ್ರಕರಣದ ಆರೋಪಿಯಾಗಿರುವ ರೋಹಿತ್ ಅಲಿಯಾಸ್ ಒಂಟೆ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಇದೇ ಹಿನ್ನೆಲೆಯಲ್ಲಿ ಆರೋಪಿಯ ಬಂಧನಕ್ಕಾಗಿ ಅಗ್ನಿ ಶ್ರೀಧರ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಸೀನನ ಮೇಲೆ ಗುಂಡಿನ ದಸಾಳಿ ನಡೆಯುವ ಎರಡು ದಿನಗಳ ಹಿಂದಷ್ಟೇ ಸೀನನ ಸಹಚರನ ಬಳಿ, ಸೀನನ್ನು ಮುಗಿಸುವುದಾಗಿ ರೋಹಿತ್ ಕೊಲೆ ಬೆದರಿಕೆ ಹಾಕಿದ್ದನಂತೆ. ಈ ಕೊಲೆ ಬೆದರಿಕೆ ಹಾಕಿದ್ದರಿಂದ ಗುಂಡಿನ ದಾಳಿಯ ಹಿಂದೆ ಕೈವಾಡ ಇದೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಇನ್ನು ಆರೋಪಿ ರೋಹಿತ್'ಗೆ ಪ್ರಗತಿಪರ ಹೋರಾಟಗಾರ ಅಗ್ನಿ ಶ್ರೀಧರ್ ಆಶ್ರಯ ನೀಡಿದ್ದಾರೆ ಎಂಬ ಅನುಮಾನದ ಮೇರೆಗೆ 100 ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ. ಇದಕ್ಕಾಗಿ ಯಲಹಂಕ ಪೊಲೀಸರು ಕೋರ್ಟ್'ನಿಂದ ಸರ್ಚ್ ವಾರೆಂಟ್ ಪಡೆದಿದ್ದರು ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.