ವಂಚಕನನ್ನು ಸೆರೆ ಹಿಡಿಯಲು ಹೋದ ಪೊಲೀಸಪ್ಪನೇ ಕಂಬಿಯ ಹಿಂದೆ!

Published : Oct 14, 2016, 02:48 AM ISTUpdated : Apr 11, 2018, 12:47 PM IST
ವಂಚಕನನ್ನು ಸೆರೆ ಹಿಡಿಯಲು ಹೋದ ಪೊಲೀಸಪ್ಪನೇ ಕಂಬಿಯ ಹಿಂದೆ!

ಸಾರಾಂಶ

ವಿದೇಶದಲ್ಲಿ ಕೆಲಸ ಖಾಲಿ ಇದೆ, ಸೂಪರ್​ವೈಸರ್​ ಕೆಲಸ ಇದೆ. ಪ್ರತೀ ತಿಂಗಳು ಲಕ್ಷ ಲಕ್ಷ ಹಣ ಗಳಿಸಬಹುದು ಎನ್ನುವ ಹಲವು ಟೋಪಿ ಜಾಹೀರಾತು ನೀವು ನೋಡಿರುತ್ತೀರಾ. ಇಂತಹುದೇ ಒಂದು ಸ್ಕೀಂ ಮಾಡಿ ಬೆಂಗಳೂರಿನ ಆನೆಕಲ್'​ನ ಆರೋಪಿ ಅಜಯ್​ ಕುಮಾರ್​ ಎಂಬಾತ 75 ಲಕ್ಷ ವಂಚಿಸಿದ್ದಾನೆ. ಕೆಜಿಎಫ್'​ನ ಸುಮಾರು 49 ಜನರಿಂದ ತಲಾ ಒಂದುವರೆ ಲಕ್ಷದಂತೆ ಟ್ರಾವೆಲ್ಸ್​ ಮಾಲೀಕನಿಂದ ಪಡೆದು ಪರಾರಿಯಾಗಿದ್ದಾನೆ. ಅಜಯ್'​ಗಾಗಿ 5 ತಿಂಗಳಿಂದ ಹುಡುಕಿದರೂ ಸುಳಿವು ಸಿಕ್ಕಿರಲಿಲ್ಲ. ಬಳಿಕ ಗೋವಾದಲ್ಲಿರುವುದು ದೃಡಪಟ್ಟಿತ್ತು. ಆದರಂತೆ ಪೊಲೀಸರ ಟೀಂ ಜೊತೆ ಜಂಬು ಪೊಲೀಸರು ಜೊತೆ ಹೋಗಿ ಅಜಯ್​ ಮನೆಗೆ ದಾಳಿ ಮಾಡಲು ಪ್ಲಾನ್ ಮಾಡಿಕೊಂಡಿದ್ದರು. ಆದರೆ  ದಾಳಿಗೂ ಮುನ್ನ ಪೊಲೀಸ್​ ತಂಡದಲ್ಲಿದ್ದ ಹೆಡ್​ ಕಾನ್ಸ್'​ಟೇಬಲ್​ ಗೋಪಾಲ್ ಸಿಂಗ್ ತನ್ನ ಗೆಳೆಯರ ಜೊತೆ ಅರೋಪಿ ಮನೆಗೆ ಹೋಗಿ  ಅರೋಪಿಯಿಂದ ಚಿನ್ನಾಭರಣ, ಹಣ ಪಡೆದು ಅಜಯ್'​ನನ್ನು ಪಾರು ಮಾಡಿದ್ದಾರೆ. ಬಳಿಕ ತಮಗೇನು ಗೊತ್ತಿಲ್ಲ ರೀತಿ ಹೈಡ್ರಾಮಾ ಮಾಡಿ ವಾಪಸ್​ ಬಂದಿದ್ದಾರೆ. ಅನುಮಾನಗೊಂಡ ಜಂಬು ಹಿರಿಯ ಅಧಿಕಾರಿಗಳಿಗೆ ದೂರು ಕೊಟ್ಟಿದ್ದಾನೆ. ಮತ್ತೆ ತನಿಖೆ ನಡೆಸಿದಾಗ ಹೆಡ್​ ಕಾನ್ಸ್​ಟೇಬಲ್​ ಕೃತ್ಯ ಬೆಳಕಿದೆ ಬಂದಿದೆ.

ಕೋಲಾರ(ಅ.14): ವಂಚಕನನ್ನು ಸೆರೆ ಹಿಡಿಯಲು ಹೋದ ಮುಖ್ಯಪೇದೆಯೇ ಕಂಬಿ ಹಿಂದೆ ಹೋಗಿದ್ದಾರೆ. ಸುಮಾರು 49 ಜನರಿಗೆ ಒಟ್ಟು 75 ಲಕ್ಷ ಹಣವನ್ನು ವಂಚಿಸಿದ ಕೇಸ್​ ಇದು. ಆರೋಪಿ ಎಸ್ಕೇಪ್ ಆಗಿದ್ದ. ಇದನ್ನು ಹಿಡಿಯಲು ಹೊರಟ ಪೊಲೀಸ್​ ಪೇದೆ ಅಂದರ್​ ಆಗಿದ್ದಾನೆ. ಅದ್ಯಾಕೆ ಅಂತೀರಾ? ಹಾಗಾದ್ರೆ ಈ ಸ್ಟೋರಿ ಓದಿ.

ವಿದೇಶದಲ್ಲಿ ಕೆಲಸ ಖಾಲಿ ಇದೆ, ಸೂಪರ್​ವೈಸರ್​ ಕೆಲಸ ಇದೆ. ಪ್ರತೀ ತಿಂಗಳು ಲಕ್ಷ ಲಕ್ಷ ಹಣ ಗಳಿಸಬಹುದು ಎನ್ನುವ ಹಲವು ಟೋಪಿ ಜಾಹೀರಾತು ನೀವು ನೋಡಿರುತ್ತೀರಾ. ಇಂತಹುದೇ ಒಂದು ಸ್ಕೀಂ ಮಾಡಿ ಬೆಂಗಳೂರಿನ ಆನೆಕಲ್'​ನ ಆರೋಪಿ ಅಜಯ್​ ಕುಮಾರ್​ ಎಂಬಾತ 75 ಲಕ್ಷ ವಂಚಿಸಿದ್ದಾನೆ. ಕೆಜಿಎಫ್'​ನ ಸುಮಾರು 49 ಜನರಿಂದ ತಲಾ ಒಂದುವರೆ ಲಕ್ಷದಂತೆ ಟ್ರಾವೆಲ್ಸ್​ ಮಾಲೀಕನಿಂದ ಪಡೆದು ಪರಾರಿಯಾಗಿದ್ದಾನೆ.

ಅಜಯ್'​ಗಾಗಿ 5 ತಿಂಗಳಿಂದ ಹುಡುಕಿದರೂ ಸುಳಿವು ಸಿಕ್ಕಿರಲಿಲ್ಲ. ಬಳಿಕ ಗೋವಾದಲ್ಲಿರುವುದು ದೃಡಪಟ್ಟಿತ್ತು. ಆದರಂತೆ ಪೊಲೀಸರ ಟೀಂ ಜೊತೆ ಜಂಬು ಪೊಲೀಸರು ಜೊತೆ ಹೋಗಿ ಅಜಯ್​ ಮನೆಗೆ ದಾಳಿ ಮಾಡಲು ಪ್ಲಾನ್ ಮಾಡಿಕೊಂಡಿದ್ದರು. ಆದರೆ  ದಾಳಿಗೂ ಮುನ್ನ ಪೊಲೀಸ್​ ತಂಡದಲ್ಲಿದ್ದ ಹೆಡ್​ ಕಾನ್ಸ್'​ಟೇಬಲ್​ ಗೋಪಾಲ್ ಸಿಂಗ್ ತನ್ನ ಗೆಳೆಯರ ಜೊತೆ ಅರೋಪಿ ಮನೆಗೆ ಹೋಗಿ  ಅರೋಪಿಯಿಂದ ಚಿನ್ನಾಭರಣ, ಹಣ ಪಡೆದು ಅಜಯ್'​ನನ್ನು ಪಾರು ಮಾಡಿದ್ದಾರೆ. ಬಳಿಕ ತಮಗೇನು ಗೊತ್ತಿಲ್ಲ ರೀತಿ ಹೈಡ್ರಾಮಾ ಮಾಡಿ ವಾಪಸ್​ ಬಂದಿದ್ದಾರೆ. ಅನುಮಾನಗೊಂಡ ಜಂಬು ಹಿರಿಯ ಅಧಿಕಾರಿಗಳಿಗೆ ದೂರು ಕೊಟ್ಟಿದ್ದಾನೆ. ಮತ್ತೆ ತನಿಖೆ ನಡೆಸಿದಾಗ ಹೆಡ್​ ಕಾನ್ಸ್​ಟೇಬಲ್​ ಕೃತ್ಯ ಬೆಳಕಿದೆ ಬಂದಿದೆ.

ಸಾಕ್ಷಿ ನಾಶ ಮಾಡಿದ ಹೆಡ್​ ಕಾನ್ಸ್​ಟೇಬಲ್​ ಗೋಪಾಲ್ ಸಿಂಗ್ ಹಾಗೂ ಆತನ ಗೆಳೆಯ ಸಾದಿಕ್ ರನ್ನು ಕೆಜಿಎಫ್  ರಾರ್ಬಟ್ ಸನ್ ಪೊಲೀಸರು ಬಂಧಿಸಿದ್ದಾರೆ. ವಂಚಕ ಅಜಯ್ ಕುಮಾರ್ ಹಾಗೂ ಆತನ ಕುಟುಂಬ ನಾಪತ್ತೆಯಾಗಿದೆ. ಪೊಲೀಸ್ ತಂಡ ಹುಡುಕಾಟ ಮುಂದುವರೆಸಿದೆ. ಒಟ್ಟಾರೆ ಆರೋಪಿಯಿಂದ ಹಣ ಪಡೆದು ವಂಚನೆಗೆ ನೆರವಾದ ಹೆಡ್​ಕಾನ್ಸ್​ಟೇಬಲ್​ ಗೋಪಾಲ್ ಸಿಂಗ್ ಈಗ ಕಂಬಿ ಹಿಂದೆ ಹೋಗಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಗಳೂರು ಕಂಬಳದಲ್ಲಿ ಹಿರಿಯ ತೀರ್ಪುಗಾರಗೆ ಅವಮಾನ, ಜಾಲತಾಣದಲ್ಲಿ ವ್ಯಾಪಕ ಅಕ್ರೋಶ
ಚಿಕ್ಕಮಗಳೂರು ನೂತನ ಎಸ್‌ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ