
ಕೋಲ್ಕತಾ: ಹೆಲ್ಮೆಟ್ ಧರಿಸದ ಬೈಕ್ ಸವಾರರೊಬ್ಬರಿಗೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾವಾಗಿ, ಬೈಕ್ ಸವಾರ ಸಾವಿಗೀಡಾದ ಘಟನೆ ಪ. ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಸುರಕ್ಷಿತ ವಾಹನ ಚಾಲನೆಗೆ ಸಂಬಂಧಿಸಿ ಅಭಿಯಾನ ನಡೆಸಿದ್ದರು.
ಆ ವೇಳೆ ಹೆಲ್ಮೆಟ್ ಧರಿಸದ ಸೌಮೇನ್ ದೇಬನಾಥ ಎಂಬವರ ಜೊತೆ ವಾಗ್ವಾದ ನಡೆದು, ಹಲ್ಲೆ ನಡೆಸಲಾಗಿದೆ. ಗಾಯಗೊಂಡ ಸೌಮೇನ್ರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಕೊನೆಯುಸಿರೆಳೆದಿದ್ದಾರೆ.
ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ಘಟನೆಯ ಬಳಿಕ ಉದ್ರಿಕ್ತ ಸ್ಥಳೀಯರು ಪೊಲೀಸರನ್ನು ಬೆನ್ನಟ್ಟಿ ಗಲಭೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.