ಚಿಕ್ಕಮಗಳೂರಿನ ದತ್ತ ಜಯಂತಿ ವೇಳೆ ಲಾಠಿ ಪ್ರಹಾರ

Published : Dec 03, 2017, 01:53 PM ISTUpdated : Apr 11, 2018, 12:40 PM IST
ಚಿಕ್ಕಮಗಳೂರಿನ ದತ್ತ ಜಯಂತಿ ವೇಳೆ ಲಾಠಿ ಪ್ರಹಾರ

ಸಾರಾಂಶ

ಧ್ವಜ ನೆಡುವ ವಿಚಾರವಾಗಿ ಸ್ಥಳದಲ್ಲಿ ಗಲಾಟೆ ನಡೆದಿದೆ. ಅಲ್ಲದೇ ನಿಷೇಧಿತ ಸ್ಥಳದಲ್ಲಿ ಭಗವಧ್ವಜವನ್ನು ನೆಡಲಾಗಿತ್ತು. ಇದರಿಂದ ಗಲಾಟೆ ನಡೆದಿದ್ದು, ಸ್ಥಳದಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ.  

ಚಿಕ್ಕಮಗಳೂರು(ಡಿ.3): ಚಿಕ್ಕಮಗಳೂರಿನಲ್ಲಿ ಮೂರು ದಿನಗಳ ಕಾಲ ನಡೆದ ದತ್ತ ಜಯಂತಿ ಹಿನ್ನೆಲೆ ಇಂದು ದತ್ತ ಪಾದುಕೆ ನಡೆದಿದ್ದು, ಈ ವೇಳೆ ನಡೆದ ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಇಂದು ದತ್ತ ಜಯಂತಿ ಮುಕ್ತಾಯದ ದಿನವಾಗಿದ್ದು, ಧ್ವಜ ನೆಡುವ ವಿಚಾರವಾಗಿ ಸ್ಥಳದಲ್ಲಿ ಗಲಾಟೆ ನಡೆದಿದೆ. ಅಲ್ಲದೇ ನಿಷೇಧಿತ ಸ್ಥಳದಲ್ಲಿ ಭಗವಧ್ವಜವನ್ನು ನೆಡಲಾಗಿತ್ತು. ಇದರಿಂದ ಗಲಾಟೆ ನಡೆದಿದ್ದು, ಸ್ಥಳದಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ.  

ಗುಂಪು ಚದುರಿಸುವ  ಸಲುವಾಗಿ ಈ ಕ್ರಮ ಕೈಗೊಂಡಿದ್ದಾರೆ.  ಸದ್ಯ ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ