ಮಾಲೂರು: ಠಾಣೆಯಲ್ಲೇ ಗುಂಡು ಹಾರಿಸಿಕೊಂಡು ಪೊಲೀಸ್ ಅಧಿಕಾರಿ ಆತ್ಮಹತ್ಯೆ

Published : Oct 17, 2016, 04:54 PM ISTUpdated : Apr 11, 2018, 12:36 PM IST
ಮಾಲೂರು: ಠಾಣೆಯಲ್ಲೇ ಗುಂಡು ಹಾರಿಸಿಕೊಂಡು ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಸಾರಾಂಶ

ನಿನ್ನೆ ತಡರಾತ್ರಿ ವೃತ್ತ ನಿರೀಕ್ಷಕ ರಾಘವೇಂದ್ರ ತನ್ನ ರಿವಾಲ್ವರ್’ನಿಂದ ಠಾಣೆಯ ತನ್ನ ಕೋಣೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ | ರೌಂಡ್ಸ್’ಗೆ ಹೋಗಿ ಬಂದು ಏಕಾಏಕಿ ರಾಘವೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದು ಬಹಳ ಸಂಶಯಗಳನ್ನು ಹುಟ್ಟುಹಾಕಿದೆ.

ಆನೇಕಲ್ ( ಅ.18): ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿಕೊಂಡು ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಿನ್ನೆ ತಡರಾತ್ರಿ ವೃತ್ತ ನಿರೀಕ್ಷಕ ರಾಘವೇಂದ್ರ ತನ್ನ ರಿವಾಲ್ವರ್’ನಿಂದ ಠಾಣೆಯ ತನ್ನ ಕೋಣೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೌಂಡ್ಸ್’ಗೆ ಹೋಗಿ ಬಂದು ಏಕಾಏಕಿ ರಾಘವೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದು ಬಹಳ ಸಂಶಯಗಳನ್ನು ಹುಟ್ಟುಹಾಕಿದೆ.

ಒಂದೆಡೆ ಮರಳು ಮಾಫಿಯಾ ಹಾಗೂ ಮೇಲಾಧಿಕಾರಿಗಳಿಂದ ಒತ್ತಡವಿತ್ತು ಎಂಬ ಮಾತುಗಳು ಕೇಳಿಬಂದಿವೆಯಾದರೆ, ಕೌಟಂಬಿಕ ಸಮಸ್ಯೆಗಳಿತ್ತು ಎಂಬ ಮಾತುಗಳು ಕೇಳಿಬಂದಿವೆ.   

ರಾಘವೇಂದ್ರ ಕಳೆದ 2012, 2013, 2014 ರಲ್ಲಿ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಕಾರ್ಯ ನಿರ್ವಹಿಸಿದ್ದರು.

2014 ರಲ್ಲಿ ಲೋಕಾಯುಕ್ತ ದಾಳಿಗೆ ಒಳಗಾದ ನಂತರ ಒಂದು ವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆಮನೆ ವಾಸ ಅನುಭವಿಸಿದ್ದರು.

ನಂತರ ಲೋಕಾಯುಕ್ತ ಪ್ರಕರಣದಿಂದ ಮುಕ್ತರಾದ ಮೇಲೆ ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರವಾಸಿಗರ ಸ್ವರ್ಗ.. ಅಸ್ಸಾಂ ರಾಜ್ಯ ಯಾವುದಕ್ಕೆ ಪ್ರಸಿದ್ಧ ನಿಮಗೆ ಗೊತ್ತೇ?
ಬಿಜೆಪಿ ಮಹಾಯುತಿಗೆ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ