
ಬೆಂಗಳೂರು, [ಸೆ.28]: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿಯ ಬ್ರಹ್ಮದೇವರ ಗುಡ್ಡೆಯಲ್ಲಿ ಪೊಲೀಸರ ಗನ್ ಸದ್ದು ಮಾಡಿದೆ.
ನಿನ್ನೆ [ಬುಧವಾರ] ಸುರೇಶ ಎಂಬಾತ ದಿನೇಶ್ ಎನ್ನುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ. ಇಂದು ಸುರೇಶನನ್ನು ಬಂಧಿಸಲು ಹೋಗಿದ್ದ ಬ್ಯಾಡರಹಳ್ಳಿ ಹೆಡ್ ಕಾನ್ಸ್ ಟೇಬಲ್ ಜ್ಯೋತಿಪ್ರಕಾಶ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.
ಇದ್ರಿಂದ ಆತ್ಮ ರಕ್ಷಣೆಗಾಗಿ ಬ್ಯಾಡರಹಳ್ಳಿ ಇನ್ಸ್ ಪೆಕ್ಟರ್ ಸತ್ಯನಾರಾಯಣ ಅವರು ಆರೋಪಿ ಸುರೇಶ್ ಮೇಲೆ ಫೖರಿಂಗ್ ಮಾಡಿದ್ದಾರೆ. ಆರೋಪಿ ಸುರೇಶ್ ಅಲಿಯಾಸ್ ಕಳ್ಳಿಪಳ್ಳಿ ಕುಣಿಗಲ್ ಮೂಲದವನು ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ