
ಗುಜರಾತ್ (ಜು.31): ರಾಜ್ಯಸಭಾ ಚುನಾವಣೆ ಗುಜರಾತ್ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಉಂಟು ಮಾಡಿದೆ. ಶಾಸಕರ ರಾಜಿನಾಮೆ ಕಾಂಗ್ರೆಸ್’ಗೆ ತಲೆನೋವಾಗಿ ಪರಿಣಮಿಸಿದೆ. ಕೆಲವೇ ದಿನಗಳಲ್ಲಿ ರಾಜ್ಯಸಭಾ ಚುನಾವಣೆ ನಡೆಯಲಿದ್ದು ಅತ್ತ ಬಿಜೆಪಿ ಗೆಲುವಿನ ತಂತ್ರ ಹೆಣೆಯುತ್ತಿದ್ದರೆ ಇತ್ತ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ರೆಸಾರ್ಟ್’ವೊಂದಕ್ಕೆ ಕರೆದುಕೊಂಡು ಬಂದು ರಾಜಕಾರಣ ಮಾಡುತ್ತಿದೆ. ಉಭಯ ಪಕ್ಷಗಳು ತಮ್ಮ ತಮ್ಮ ರಣತಂತ್ರಗಳನ್ನು ಹೆಣೆಯುತ್ತಿವೆ.
42 ಮಂದಿ ಶಾಸಕರನ್ನು ಬೆಂಗಳೂರಿನ ರೆಸಾರ್ಟ್’ಗೆ ಕಳುಹಿಸಿದ ಬಳಿಕ ಇದೀಗ ಚುನಾವಣಾ ಆಯೋಗದ ಸೂಚನೆಯಂತೆ 9 ಮಂದಿ ಶಾಸಕರನ್ನು ಗುಜರಾತ್’ನಲ್ಲೇ ಉಳಿಯುವಂತೆ ಮಾಡಲು ಪೊಲೀಸ್ ರಕ್ಷಣೆ ನೀಡಲಾಗಿದೆ. 6 ಜನ ಬಂಡಾಯ ಶಾಸಕರು ಹಾಗೂ ವಲ್ಸದ್ ಜಿಲ್ಲೆಯ ಇಬ್ಬರು ಶಾಸಕರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬೆಂಗಳೂರಿನಲ್ಲಿರುವ ಶಾಸಕರು ರಾಜ್ಯಕ್ಕೆ ಮರಳಲು ಸನ್ನದ್ಧರಾಗಿದ್ದಾರೆ. ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಸೂಕ್ತ ಭದ್ರತೆ ನೀಡುವ ಭರವಸೆ ನೀಡಿದರೆ ಅವರು ವಾಪಸ್ಸಾಗುತ್ತಾರೆ ಎಂದು ಕಾಂಗ್ರೆಸ್ ವಕ್ತಾರ ಶಕ್ತಿಸಿಂಗ್ ಗೋಹಿಲ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.