
ಬಾಗಲಕೋಟೆ (ಮಾ.19): ಬಾಗಲಕೋಟೆ ಜಿಲ್ಲಾ ಅಪರಾಧ ಪತ್ತೆ ದಳವು ಮಾರುವೇಷದಲ್ಲಿ ದಾಳಿ ಮಾಡಿ ಕಲಬೆರಕೆ ಹಾಲು ಮಾರಾಟ ಮಾಡುತ್ತಿದ್ದ ಘಟಕವನ್ನು ಮುಟ್ಟುಗೋಲು ಹಾಕಿದೆ.
ಇನ್ಸಪೆಕ್ಟರ್ ಯು.ಬಿ. ಚಿಕ್ಕಮಠ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಬಿದರಿ ಗ್ರಾಮದಲ್ಲಿರುವ ಹಾಲಿನ ಘಟಕವನ್ನು ಮುಟ್ಟುಗೋಲು ಹಾಕಿ, ಶಶಿಕಾಂತ್ ಪೂಜಾರಿ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.
ನಾರಾಯಣ ಎಂಬವರಿಗೆ ಸೇರಿದ ಈ ಹಾಲಿನ ಘಟಕದಲ್ಲಿ ಹಾಲಿಗೆ ಕಾಸ್ಟಿಕ್ ಸೋಡಾ, ಕೆಮಿಕಲ್ ಬೆರೆಸಿ ಮಾರಾಟ ಮಾಡ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು, 36 ಕ್ಯಾನ್ ಕಲಬೆರೆಕೆ ಹಾಲು ಮತ್ತು ಒಂದು ವಾಹನವನ್ನು ಜಪ್ತಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.