
ಬಳ್ಳಾರಿ(ಅ.13): ಇಲ್ಲಿನ ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ 70 ಕ್ಕೂ ಹೆಚ್ಚು ಪೊಲೀಸರು ಜೈಲಿನಲ್ಲಿ ಕೈದಿಗಳು ಬಳಸುತ್ತಿದ್ದ ಗಾಂಜಾ, ಮೊಬೈಲ್ ಸಿಮ್ ಕಾರ್ಡ್'ಗಳನ್ನು ವಶಪಡಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬಳ್ಳಾರಿ ಎಸ್ಪಿ ಆರ್ ಚೇತನ್ ಅವರು ಇಂದು ಮುಂಜಾನೆ 11 ಗಂಟೆಗೆ ಎಸ್ಪಿ,ಇಬ್ಬರು ಡಿವೈಎಸ್ಪಿ, 8 ಪಿಎಸ್ಐ, 70 ಪೊಲೀಸ್ ಪೇದೆಗಳು, ಶ್ವಾನದಳದ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದರು. ಒಂದು ಗಂಟೆಗಳ ಕಾಲ ಪರಿಶೀಲನೆ ನಡೆಸಿದರು.
ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ಪ್ರಕರಣದ ನಂತರ ಬಳ್ಳಾರಿ ಜೈಲೂ ಸಹ ಸಾಕಷ್ಟೂ ಸುದ್ದಿಯಾಗಿತ್ತು. ಹೀಗಾಗಿ ಪೊಲೀಸರು ಇಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.