ಹುಕ್ಕಾ ಬಾರ್ ಮೇಲೆ ದಾಳಿ: ಸ್ಯಾಂಡಲ್ವುಡ್ ಹೀರೋ ಅರುಣ್ ಗೌಡ ಬಂಧನ

Published : May 08, 2017, 11:52 PM ISTUpdated : Apr 11, 2018, 01:11 PM IST
ಹುಕ್ಕಾ ಬಾರ್ ಮೇಲೆ ದಾಳಿ: ಸ್ಯಾಂಡಲ್ವುಡ್ ಹೀರೋ ಅರುಣ್ ಗೌಡ ಬಂಧನ

ಸಾರಾಂಶ

ಚಂದ್ರಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಮೇ 7 ರಂದು ದಾಳಿ ನಡೆದಿತ್ತು.  

ಬೆಂಗಳೂರು(ಮೇ 09): ಸಿಸಿಬಿ ಪೊಲೀಸರು ಹುಕ್ಕಾ ಬಾರ್ ಅಡ್ಡೆ ಮೇಲೆ ದಾಳಿ ನಡೆಸಿದ್ದು, ಓರ್ವ ನಟ ಸೇರಿ 6 ಮಂದಿಯನ್ನು ಬಂಧಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಂಧಿತರಲ್ಲಿ ಚಿತ್ರನಟ ಹಾಗೂ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ರಿಯಾಲಿಟಿ ಶೋ 'ಪ್ಯಾಟೆ ಮಂದಿ ಕಾಡಿಗ್ ಬಂದ್ರು'ನಲ್ಲಿ ಸ್ಪರ್ಧಿಸಿದ್ದ ನಟ ಅರುಣ್ ಗೌಡ ಸಹ ಸೇರಿದ್ದಾರೆನ್ನಲಾಗಿದೆ. ಚಂದ್ರಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಮೇ 7 ರಂದು ದಾಳಿ ನಡೆದಿತ್ತು.

ನಟ ಅರುಣ್ ಗೌಡ(ಅರು ಗೌಡ ಎಂದೂ ಖ್ಯಾತ) ಅವರು "ಮುದ್ದು ಮನಸೇ", "ನಾನು ನಮ್ ಹುಡ್ಗಿ" ಸಿನಿಮಾಗಳಲ್ಲಿ ನಾಯಕನಟನಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿ ನರಮೇಧ ನಡೆಸಿದ ತಂದೆ-ಮಗನಿಗೆ ಐಸಿಸ್‌ ಲಿಂಕ್‌ ದೃಢ
ಪ್ರಧಾನಿ ಮೋದಿ ಕೂರಿಸಿ ಜೋರ್ಡಾನ್‌ ಪ್ರಿನ್ಸ್‌ ಕಾರು ಚಾಲನೆ!