
ಬೆಂಗಳೂರು(ಫೆ.17): ಜಲ್ಲಿಕಟ್ಟು ಆಚರಣೆ ವಿರೋಧ ಮಾಡಿದಕ್ಕೆ ಗ್ರಾಮಸ್ಥರೇ ಪೊಲಿಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಆನೇಕಲ್ ಇಂಡ್ಲವಾಡಿ ಗ್ರಾಮದ ಬಳಿ ನಡೆದಿದೆ.
ಗ್ರಾಮದಲ್ಲಿ ಜಲ್ಲಿಕಟ್ಟು ನಡೆಸಲು ತಮಿಳುನಾಡು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ 500 ಕ್ಕೂ ಹೆಚ್ಚು ಹೋರಿಗಳನ್ನು ಕರೆ ತರಲಾಗಿತ್ತು. ಆದರೆ ಪೊಲೀಸರು ಇದಕ್ಕೆ ವಿರೋಧಿಸಿದ್ದರು. ಅವಕಾಶ ಕೊಡಲಿಲ್ಲ ಎಂದು ಸಿಟ್ಟಿಗೆದ್ದ ಗ್ರಾಮಸ್ಥರು ಆನೇಕಲ್ ಹಾಗು ಬನ್ನೇರುಘಟ್ಟ ಪೊಲೀಸರ ಮೇಲೆ ಹೋರಿಗಳನ್ನು ಬಿಟ್ಟು ದಾಂಧಲೆ ನಡೆಸಿದ್ದಾರೆ.
ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಗಂಭೀರ ಗಾಯಾಗಾಳದ ಪೊಲೀಸರನ್ನ ಸ್ಥಳೀಯ ಆಸ್ಪತ್ರೆ ಗೆ ರವಾನೆ ಮಾಡಲಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.