ಎಫ್'ಐಆರ್ ದಾಖಲಿಸದೇ ಇದ್ರೆ ಪೊಲೀಸರ ಮೇಲೆ ಕ್ರಿಮಿನಲ್ ಕೇಸ್..?

Published : Feb 12, 2017, 09:59 AM ISTUpdated : Apr 11, 2018, 12:51 PM IST
ಎಫ್'ಐಆರ್ ದಾಖಲಿಸದೇ ಇದ್ರೆ ಪೊಲೀಸರ ಮೇಲೆ ಕ್ರಿಮಿನಲ್ ಕೇಸ್..?

ಸಾರಾಂಶ

ಠಾಣೆಗಳಲ್ಲಿ ಎಫ್‌'ಐಆರ್ ದಾಖಲಿಸಿಕೊಳ್ಳದೇ ಇರುವುದನ್ನು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಬೇಕು. ಇಂಥ ಪ್ರಕರಣಗಳಲ್ಲಿ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕಾನೂನು ರೂಪಿಸಬೇಕು ಎಂದು ಸ್ಥಾಯಿ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ನವದೆಹಲಿ(ಫೆ.12): ಜನಸಾಮಾನ್ಯರು ಪೊಲೀಸ್ ಠಾಣೆಗಳಿಗೆ ತೆರಳಿ ದೂರು ನೀಡಲು ಹೋದರೆ ಪೊಲೀಸರು ಎಫ್‌'ಐಆರ್ ದಾಖಲಿಸಿಕೊಳ್ಳುವುದಿಲ್ಲ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದೀಯ ಸ್ಥಾಯಿ ಸಮಿತಿಯೊಂದು, ಎಫ್‌'ಐಆರ್ ದಾಖಲಿಸಿಕೊಳ್ಳದೇ ಇರುವುದು ಅಥವಾ ನಿರಾಕರಿಸುವುದನ್ನು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಿ, ಅಂಥ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತಹ ಕಾನೂನು ರೂಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.

2015ರಲ್ಲೇ ಇಂಥದ್ದೊಂದು ಸಲಹೆ ನೀಡಲಾಗಿತ್ತಾದರೂ, ಎಲ್ಲಾ ಠಾಣೆಗಳಲ್ಲೂ ಎಫ್‌'ಐಆರ್ ದಾಖಲಿಸಿಕೊಳ್ಳುವುದನ್ನು ಖಾತರಿಗೊಳಿಸಿ ಎಂದು ರಾಜ್ಯಗಳಿಗೆ ಸಲಹೆ ನೀಡಿ ಕೇಂದ್ರ ಸರ್ಕಾರ ಕೈತೊಳೆದುಕೊಂಡಿದೆ. ಇದರಿಂದ ಯಾವುದೇ ಪ್ರಯೋಜನ ಆಗಿಲ್ಲ ಎಂದು ಪಿ.ಚಿದಂಬರಂ ಅಧ್ಯಕ್ಷತೆಯ ಕೇಂದ್ರ ಗೃಹ ಸಚಿವಾಲಯಗಳ ಕುರಿತಾದ ಸಂಸದೀಯ ಸ್ಥಾಯಿ ಸಮಿತಿ, ಸರ್ಕಾರದ ಧೋರಣೆಯನ್ನು ತರಾಟೆಗೆ ತೆಗೆದುಕೊಂಡಿದೆ.

ನಮ್ಮ ಈ ಹಿಂದಿನ ಸಲಹೆಗೆ ದೇಶದ ಎಲ್ಲಾ 12,519 ಪೊಲೀಸ್ ಠಾಣೆಗಳಲ್ಲೂ ಶೇ.100ರಷ್ಟು ಪ್ರಮಾಣದಲ್ಲಿ ಎಫ್‌'ಐಆರ್ ದಾಖಲು ಮಾಡಲಾಗುತ್ತಿದೆ ಎಂದು ನೀವು ಮಾಹಿತಿ ನೀಡಿದ್ದೀರಿ. ಇಂಥ ಮಾಹಿತಿ ನೀಡಲು ಯಾವ ದಾಖಲೆ ಬಳಸಿಕೊಂಡಿದ್ದೀರಿ ಎಂಬುದನ್ನು ತೋರಿಸಿ’ ಎಂದು ಸ್ಥಾಯಿ ಸಮಿತಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಸರ್ಕಾರದ ಇಂಥ ಧೋರಣೆಯಿಂದಾಗಿ ಈಗಲೂ ಜನಸಾಮಾನ್ಯರು ಠಾಣೆಯಲ್ಲಿ ನ್ಯಾಯಾಕ್ಕಾಗಿ ಅಲೆಯುವಂತಾಗಿದೆ. ಹೀಗಾಗಿ ಠಾಣೆಗಳಲ್ಲಿ ಎಫ್‌'ಐಆರ್ ದಾಖಲಿಸಿಕೊಳ್ಳದೇ ಇರುವುದನ್ನು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಬೇಕು. ಇಂಥ ಪ್ರಕರಣಗಳಲ್ಲಿ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕಾನೂನು ರೂಪಿಸಬೇಕು ಎಂದು ಸ್ಥಾಯಿ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕೆಗೆ ಗೃಹಸಚಿವ ಪರಂ ತಿರುಗೇಟು!
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ