
ಬೆಂಗಳೂರು(ಸೆ.05): ಬಿಜೆಪಿ ಕಾರ್ಯಕರ್ತರು ಮಂಗಳೂರು ಚಲೋ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಹೀಗಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರ ಹರಸಾಹಸಪಡುವಂತಾಗಿದೆ. ಇದೇ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಳಿ ಮನೆಯಿಂದ ಹೊರಬಾರದಂತೆ ಮನವಿ ಮಾಡಿಕೊಂಡಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.
ಯಡಿಯೂರಪ್ಪ ಡಾಲರ್ಸ್ ಕಾಲೋನಿಯಲಗಲಿರುವ ತಮ್ಮ ನಿವಾಸದಲ್ಲಿದ್ದಾರೆ. ಇವರು ಬೆಳಿಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್ನಿಂದ ಹೊರಡಬೇಕಿದ್ದ ಬೆಂಗಳೂರಿನ ಬಿಜೆಪಿ ಕಾರ್ಯಕರ್ತರ ರ್ಯಾಲಿಗೆ ಚಾಲನೆ ನೀಡಬೇಕಿತ್ತು ಆದರೆ ಬಿಎಸ್ವೈ ಭಾಗಿಯಾದ್ರೆ ಕಾರ್ಯಕರ್ತರು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಮ್ಮ ನಿವಾಸದಿಂದ ಹೊರಬರದಿರುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇತ್ತ ಯಡಿಯೂರಪ್ಪ ಮಾತ್ರ ಱಲಿ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿ ಉಳಿದು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.