
ಬೆಂಗಳೂರು(ಸೆ. 13): ಮಾಗಡಿರಸ್ತೆಯ ಸುಂಕದಕಟ್ಟೆ ಸಮೀಪದ ಹೆಗ್ಗನಹಳ್ಳಿ ಮಂಗಳವಾರವೂ ರಣಾಂಗಣವಾಗಿದೆ. ನಿನ್ನೆ ಪೊಲೀಸರ ಗುಂಡೇಟಿಗೆ ಉಮೇಶ್ ಎಂಬುವವರು ಬಲಿಯಾದರೂ ಜನರ ಕಾವೇರಿ ಕೆಚ್ಚು ಮುಂದುವರಿದಿದೆ. ಪ್ರದೇಶದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದರೂ ಜನರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಪೊಲೀಸರ ಮೇಲೆ ಕಲ್ಲೆಸೆಯುತ್ತಿದ್ದಾರೆ. ಡಿಸಿಪಿ ಹರ್ಷ ನೇತೃತ್ವದಲ್ಲಿ ಪೊಲೀಸರ ತಂಡವು ಜನರನ್ನು ನಿಯಂತ್ರಿಸಲು ಅಶ್ರುವಾಯು ಪ್ರಯೋಗ ನಡೆಸಿದೆ.
ನಿನ್ನೆ ಹೆಗ್ಗನಹಳ್ಳಿ ಬಳಿ ಜನರು ಪೊಲೀಸರ ವಾಹನವನ್ನೇ ಜಖಂಗೊಳಿಸಿದ್ದರು. ಈ ವೇಳೆ, ಗುಂಪು ಚದುರಿಸಲು ಪೊಲೀಸರು ಹಾರಿಸಿದ ಗುಂಡಿಗೆ ಅಮಾಯಕ ಉಮೇಶ್ ಬಲಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.