ವಿಚಾರಣೆ ವೇಳೆ ಆರೋಪಿ ಸಾವು: ಗ್ರಾಮಸ್ಥರ ಆಕ್ರೋಶಕ್ಕೆ ಭಸ್ಮವಾಯಿತು ಪೊಲೀಸ್ ಠಾಣೆ

Published : Feb 05, 2017, 04:57 AM ISTUpdated : Apr 11, 2018, 12:57 PM IST
ವಿಚಾರಣೆ ವೇಳೆ ಆರೋಪಿ ಸಾವು: ಗ್ರಾಮಸ್ಥರ ಆಕ್ರೋಶಕ್ಕೆ ಭಸ್ಮವಾಯಿತು ಪೊಲೀಸ್ ಠಾಣೆ

ಸಾರಾಂಶ

ಪೊಲೀಸ್ ಠಾಣೆಯೊಂದು ಗ್ರಾಮಸ್ಥರ ಆಕ್ರೋಶಕ್ಕೆ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬನನ್ನು ಲಾಕಪ್ ಡೆತ್ ಮಾಡಿದ್ದಾರೆಂಬ ಶಂಕೆಯ ಮೇಲೆ ಆಕ್ರೋಶಿತರಾದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು   ಗದಗ ಜಿಲ್ಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ.

ಗದಗ(ಫೆ.05): ಪೊಲೀಸ್ ಠಾಣೆಯೊಂದು ಗ್ರಾಮಸ್ಥರ ಆಕ್ರೋಶಕ್ಕೆ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬನನ್ನು ಲಾಕಪ್ ಡೆತ್ ಮಾಡಿದ್ದಾರೆಂಬ ಶಂಕೆಯ ಮೇಲೆ ಆಕ್ರೋಶಿತರಾದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಗದಗ ಜಿಲ್ಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ.

ಇಂತಹುದೊಂದು ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಕಳೆದ ರಾತ್ರಿ ಅಕ್ರಮವಾಗಿ ಮರಳು ಸಾಗಾಣಿಕೆ ದಾಳಿ ನಡೆದಿದ್ದು, ಈ ವೇಳೆ ಲಾರಿ ಚಾಲಕ ಶಿವಪ್ಪ ಗಾನಗೇರ ಎಂಬ ವ್ಯಕ್ತಿಯನ್ನು ಲಕ್ಷ್ಮೇಶ್ವರ ಠಾಣೆಯ ಪೊಲೀಸರು ಬಂಧಿಸಿ, ವಿಚಾರಣೆಗೆಂದು ಕರೆ ತಂದಿದ್ದರು. ಆದರೆ  ವಿಚಾರಣೆ ವೇಳೆ ವ್ಯಕ್ತಿ ಸಾವನ್ನಪ್ಪಿದ್ದಾನೆ.

ವಿಚಾರಣೆ ವೇಳೆ ಪೊಲೀಸರೇ ಆರೋಪಿಯ ಮೇಲೆ ಹಲ್ಲೆ ನಡೆಸಿ ಲಾಕಪ್ ಡೆತ್ ಮಾಡಿದ್ದಾರೆ ಎಂದು ಆಕ್ರೋಶಿತರಾದ ಶಿರಹಟ್ಟಿ ತಾಲೂಕಿನ ಬಟ್ಟೂರು ಗ್ರಾಮಸ್ಥರು ಮತ್ತು ಮೃತನ ಕುಟುಂಬದವರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸ್ ವಾಹನ, ಬೈಕ್ಗಳನ್ನು ಸುಟ್ಟು ಕರಕಲಾಗಿವೆ.ಅಲ್ಲದೇ ಇನ್ನು ಠಾಣೆ ಮುಂದೆ ಮೃತನ ಶವ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ.

ಜನರ ಈ ಆಕ್ರೋಶ ಕಂಡು ಪೊಲೀಸರು ಪರಾರಿಯಾಗಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿದ್ಯಾರ್ಥಿಗಳೇ ತಂತ್ರಜ್ಞಾನ ಯುಗದಲ್ಲಿ ಪ್ರಶ್ನೆ ಮಾಡುವ ಧೈರ್ಯ ಬೆಳೆಸಿಕೊಳ್ಳಿ: ರಶ‍್ಮಿ ಮಹೇಶ್
ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌, ಇನ್ನು 10 ಗಂಟೆ ಮುಂಚಿತವಾಗಿ ವೇಟಿಂಗ್‌ ಲಿಸ್ಟ್‌/RAC ಟಿಕೆಟ್‌ ಸ್ಟೇಟಸ್‌ ಚೆಕ್‌ ಮಾಡಬಹುದು..!