ಜಾರ್ಖಂಡ್'ನಲ್ಲಿ ನಕ್ಸಲ್ ದಾಳಿಗೆ ಐವರು ಪೊಲೀಸರು ಹುತಾತ್ಮ!

Published : Jun 14, 2019, 08:44 PM IST
ಜಾರ್ಖಂಡ್'ನಲ್ಲಿ ನಕ್ಸಲ್ ದಾಳಿಗೆ ಐವರು ಪೊಲೀಸರು ಹುತಾತ್ಮ!

ಸಾರಾಂಶ

ಜಾರ್ಖಂಡ್'ನಲ್ಲಿ ಅಟ್ಟಹಾಸ ಮೆರೆದ ನಕ್ಸಲೀಯರು| ನಕ್ಸಲ್ ದಾಳಿಗೆ ಐವರು ಪೊಲೀಸರು ಹುತಾತ್ಮ| ಸರೈಕೆಲಾ ಜಿಲ್ಲೆಯಲ್ಲಿ ಏಕಾಏಕಿ ದಾಳಿ ನಡೆಸಿದ ನಕ್ಸಲೀಯರು| ದಾಳಿ ನಡೆಸಿದ ನಕ್ಸಲೀಯರಿಗಾಗಿ ತೀವ್ರ ಶೋಧ| ಘಟನೆಯನ್ನು ತೀವ್ರವಾಗಿ ಖಂಡಿಸಿದ ಸಿಎಂ ರಘುಬರ್ ದಾಸ್|

ಜಮ್'ಶೇಡ್'ಪುರ್(ಜೂ.14): ನಕ್ಸಲೀಯರು ನಡೆಸಿದ ದಾಳಿಯಲ್ಲಿ ಕನಿಷ್ಠ 5 ಪೊಲೀಸರು ಹುತಾತ್ಮರಾಗಿರುವ ಘಟನೆ ಜಾರ್ಖಂಡ್'ನ ಸರೈಕೆಲಾ ನಡೆದಿದೆ.

ಇಲ್ಲಿನ ಸರೈಕೆಲಾ ಜಿಲ್ಲೆಯಲ್ಲಿ ಕೂಂಬಿಂಗ್ ನಡೆಸುತ್ತಿದ್ದ ಪೊಲೀಸರ ಮೇಲೆ ಏಕಾಏಕಿ ದಾಳಿ ನಡೆಸಿದ ನಕ್ಸಲೀಯರು, ಐವರು ಪೊಲೀಸರನ್ನು ಬಲಿ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ.ಬಂಗಾಳ ಗಡಿಯಲ್ಲಿ ಘಟನೆ ನಡೆದಿದ್ದು, ದಾಳಿ ನಡೆಸಿರುವ ನಕ್ಸಲೀಯರು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ಸುತ್ತಲಿನ ಸ್ಥಳವನ್ನು ಸುತ್ತುವರೆದಿರುವ ಪೊಲೀಸರು ನಕ್ಸಲೀಯರಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ಇನ್ನು ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಿಎಂ ರಘುಬರ್ ದಾಸ್, ಹುತಾತ್ಮ ಪೊಲೀಸರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಧಾರ್‌ ಲಿಂಕ್‌ ಕಮಾಲ್‌, ಒಂದೇ ವರ್ಷದಲ್ಲಿ 3 ಕೋಟಿ ಫೇಕ್‌ IRCTC ಅಕೌಂಟ್‌ ಬಂದ್‌ ಮಾಡಿದ ಭಾರತೀಯ ರೈಲ್ವೇ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ