
ಕೊಹಿಮಾ(ಜು.09): ನಾಗಲ್ಯಾಂಡ್'ನಲ್ಲಿ ಕೇವಲ 4 ತಿಂಗಳ ಅವಧಿಯಲ್ಲಿ ಮತ್ತೆ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಮುಖ್ಯಮಂತ್ರಿ ವಿರುದ್ಧ 30ಕ್ಕೂ ಹೆಚ್ಚು ಶಾಸಕರು ಬಂಡೆದಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಮಾಜಿ ಮುಖ್ಯಮಂತ್ರಿ ಟಿ.ಆರ್. ಝೆಲಿಯಾಂಗ್ ಅವರ ವಿರುದ್ಧ ಸ್ವಪಕ್ಷ ನಾಗ ಪೀಪಲ್ಸ್ ಫ್ರಂಟ್ ಶಾಸಕರು ತಿರುಗಿಬಿದ್ದ ಕಾರಣ ಡಾ. ಶುರ್ಹೋಲ್ಜೀ ಲೈಝೆಟ್ಸು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಈಗ ಝೆಲಿಯಾಂಗ್ ಅವರಿಗಾದ ಸ್ಥಿತಿಯೇ ಶುರ್ಹೋಲ್ಜೀ'ಗೂ ಒದಗಿ ಬಂದಿದೆ.ಎನ್'ಪಿಎಫ್'ನ 30ಕ್ಕೂ ಹೆಚ್ಚು ಶಾಸಕರು ಅಸ್ಸಾಂ'ನ ಕಾಜಿರಂಗಾ ರಾಷ್ಟ್ರೀಯ ಉದ್ಯಾನದ ಸಮೀಪವಿರುವ ರೆಸಾರ್ಟ್'ನಲ್ಲಿ ವಾಸ್ತವ್ಯ ಹೂಡಿದ್ದು, ಮಾಜಿ ಮುಖ್ಯಮಂತ್ರಿ ಝೆಲಿಯಾಂಗ್ ಅವರನ್ನೆ ಬೆಂಬಲಿಸುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಈ ನಡುವೆ ಝೆಲಿಯಾಂಗ್ ಕೂಡ ರಾಜ್ಯಪಾಲ ಪಿ.ಬಿ. ಆಚಾರ್ಯ ಅವರಿಗೆ ಪತ್ರ ಬರೆದಿದ್ದು, ತಮಗೆ 30 ಎನ್'ಪಿಎಫ್ ಶಾಸಕರು ಹಾಗೂ 7 ಸ್ವತಂತ್ರ ಶಾಸಕರ ಬೆಂಬಲವಿದ್ದು, ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹಾಲಿ ಮುಖ್ಯಮಂತ್ರಿ ಡಾ. ಶುರ್ಹೋಲ್ಜೀ ಲೈಝೆಟ್ಸು ನಾಲ್ವರು ಸಚಿವರು ಒಳಗೊಂಡಂತೆ 10 ಮಂದಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದ ನಂತರ ಆಂತರಿಕ ಕಲಹ ಏರ್ಪಟ್ಟಿದೆ. ಅಲ್ಲದೆ ಇವೆಲ್ಲ ಕಾರಣಗಳಿಗೆ 4 ವರ್ಷದ ಹಿಂದೆ ಪಕ್ಷದಿಂದ ಉಚ್ಚಾಟನೆಗೊಂಡಿದ್ದ ಹಾಲಿ ಸಂಸದ ಹಾಗೂ ಮಾಜಿ ಸಂಸದ ನೀಫಿಯು ರಿಯೊ ಅವರೆ ಕಾರಣ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.