
ಬೆಂಗಳೂರು : ಲೋಕಸಭಾ ಚುನಾವಣೆ ಇನ್ನೇನು ಸಮೀಪಿಸುತ್ತಿದೆ. ಇದೇ ವೇಳೆ ರಾಜಕೀಯ ಪಕ್ಷಗಳು ಸಕಲ ಸಿದ್ಧತೆಯಲ್ಲಿ ತೊಡಗಿದ್ದು, ತಮ್ಮ ಅದೃಷ್ಟ ಪರೀಕ್ಷೆಗಾಗಿ ದೇವರುಗಳನ್ನು ಆಯ್ಕೆ ಮಾಡಿಕೊಂಡಿವೆ.
ಬಿಜೆಪಿ ರಾಮನನ್ನು ತನ್ನ ದೇವರೆಂದು ಆಯ್ಕೆ ಮಾಡಿಕೊಂಡರೆ, ಸಮಾಜವಾದಿ ಪಕ್ಷವು ವಿಷ್ಣುವನ್ನು ಆಯ್ಕೆ ಮಾಡಿಕೊಂಡಿದೆ. ಇನ್ನು ಕಾಂಗ್ರೆಸ್ ಪಕ್ಷವು ಶಿವನನ್ನು ತನ್ನ ದೇವರಾಗಿ ಆಯ್ಕೆ ಮಾಡಿಕೊಂಡಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗಷ್ಟೇ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡಿದ್ದು, ಈ ವೇಳೆ ಅವರನ್ನು ಬಿಳ್ಕೊಡಲು ಸ್ವಕ್ಷೇತ್ರದ ಕಾರ್ಯಕರ್ತರು ಶಿವ ಭಕ್ತರ ವೇಷ ತೊಟ್ಟಿದ್ದರು.
ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಮಹೇಂದ್ರ ನಾಥ್ ಪಾಂಡೆ ಅವರು ರಾಮ ಮಂದಿರ ನಿರ್ಮಾಣ ಮಾಡುವ ಬಗ್ಗೆ ಪದೇ ಪದೇ ಪ್ರಸ್ತಾಪ ಮಾಡುತ್ತಿದ್ದಾರೆ.
ಇತ್ತ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರು ವಿಷ್ಣುವಿನ ಬೃಹತ್ ನಗರಿಯನ್ನು ನಿರ್ಮಾಣ ಮಾಡುವ ಯೋಜನೆಯೊಂದನ್ನು ಕೈಗೆತ್ತಿಕೊಂಡಿದ್ದಾರೆ. ಈ ನಗರಿಯಲ್ಲಿ ವಿಷ್ಣುವಿನ ದೇವಾಲಯವನ್ನೂ ಕೂಡ ನಿರ್ಮಾಣ ಮಾಡಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.