
ಬೆಂಗಳೂರು: ಕಳೆದ ಸರ್ಕಾರದ ಅವಧಿಯಲ್ಲಿ ಅರ್ಹರಲ್ಲದ ವ್ಯಕ್ತಿಗಳನ್ನು ಸಹ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಲಾಗಿತ್ತು ಎಂದು ಹೇಳುವ ಮೂಲಕ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದೇವೇಗೌಡರು, ಯಾವುದೇ ಹೊಸ ಸರ್ಕಾರ ಬಂದರೂ ಹಿಂದಿನ ಸರ್ಕಾರದ ನೇಮಕವನ್ನು ರದ್ದು ಮಾಡುತ್ತದೆ. ಬಿಜೆಪಿ ಅವಧಿಯ ಸದಸ್ಯರು ನೇಮಕವಾಗಿದ್ದ ಕೆಲವೇ ತಿಂಗಳಲ್ಲೇ ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡು ಬಿಜೆಪಿ ಅವಧಿಯ ನೇಮಕ ರದ್ದು ಮಾಡಿದ್ದರು.
ಹೀಗಾಗಿ ಸಮ್ಮಿಶ್ರ ಸರ್ಕಾರದಲ್ಲೂ ಅದನ್ನು ಮಾಡಿದ್ದೇವೆ. ಸಿಂಡಿಕೇಟ್ ಹಾಗೂ ಸೆನೆಟ್ ಸದಸ್ಯರ ಹುದ್ದೆಗೆ ಅರ್ಹರನ್ನು ನೇಮಕ ಮಾಡಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು. ಈ ಮೂಲಕ ಸಿದ್ದರಾಮಯ್ಯ ಅವರ ವಿರೋಧದ ನಡುವೆಯೂ ಸಿಂಡಿಕೇಟ್ ಸದಸ್ಯರ ನೇಮಕ ರದ್ದುಗೊಳಿಸಿದ್ದ ತಮ್ಮ ನಿರ್ಧಾರವನ್ನು ಸಚಿವರು ಮತ್ತೊಮ್ಮೆ ಸಮರ್ಥಿಸಿಕೊಂಡಂತಾಗಿದೆ.
ಹಾಗಾದರೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅನರ್ಹರು ನೇಮಕವಾಗಿದ್ದರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವು ಅನರ್ಹರನ್ನು ಸಹ ನೇಮಕ ಮಾಡಲಾಗಿತ್ತು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ