
ಬೆಂಗಳೂರು (ಜ.23): ಬರ ಪರಿಹಾರದ ಹಣ ಕುರಿತಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಧ್ಯೆ ಜಟಾಪಟಿ ಮುಗಿಯುತ್ತಿಲ್ಲ.
ಜನವರಿಗೆ 19ರಂದು ಕೇಂದ್ರ ಸರ್ಕಾರ ಅನುದಾನ ಘೋಷಿಸಿದೆಯೇ ಹೊರತು, ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದರು. ತಮ್ಮ ಅಧಿಕೃತ ಟ್ವಿಟರ್ನಲ್ಲೇ ಅಸಮಾಧಾನ ಹೊರಹಾಕಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಪ್ರಧಾನಿಯನ್ನು ಭೇಟಿ ಮಾಡಿಸಿದ್ದೇವೆ, ಪರಿಹಾರ ಕೊಡಿಸಿದ್ದೇವೆ. ಮುಂದಿನ ಕೆಲಸ ರಾಜ್ಯ ಸರ್ಕಾರದ್ದು. ಆ ಕೆಲಸವನ್ನೂ ಮಾಡಿಸಿಕೊಳ್ಳೋಕೆ ಆಗೋದಿಲ್ಲವೇ? ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಕೆಲಸ ಮಾಡೋಕೆ ಆಗುತ್ತೆ ಅನ್ನೋದಾದ್ರೆ ಮಾಡಿ, ಇಲ್ಲಾಂದ್ರೆ ರಾಜೀನಾಮೆ ಕೊಟ್ಟು ಹೋಗಿ, ಆ ಕೆಲಸವನ್ನೂ ನಾವೇ ಮಾಡುತ್ತೇವೆ ಎಂದು ತಿರುಗೇಟು ಕೊಟ್ಟಿದ್ದಾರೆ.
ಸಿದ್ದರಾಮಯ್ಯ, ಸೋನಿಯಾ ಗಾಂಧಿ ಕರೆದರು ಎಂದು ದೆಹಲಿಗೆ ಬರುತ್ತಾರೆ. ಆದರೆ, ಪ್ರಧಾನಿಯನ್ನು ನೋಡಲು ಹೋಗುತ್ತಿದ್ದೇನೆ ಎಂದು ಹೇಳ್ತಾರೆ. ಇಲ್ಲಿ, ಯಾರಿಗೂ ವಿಷಯವೇ ಗೊತ್ತಿರಲ್ಲ. ಸಿದ್ದರಾಮಯ್ಯನವರಿಗೆ ಕೇಂದ್ರವನ್ನು ಟೀಕಿಸುವುದೇ ಕೆಲಸವಾಗಿದೆ ಎಂದು ತಿರುಗೇಟು ಕೊಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.