ಕುಕ್ಕೆಯಲ್ಲಿ ಆಶ್ಲೇಷ ಬಲಿ, ಅನ್ನಸಂತರ್ಪಣೆ ಸ್ಥಗಿತ

Published : Jul 16, 2019, 12:19 PM ISTUpdated : Jul 16, 2019, 12:21 PM IST
ಕುಕ್ಕೆಯಲ್ಲಿ ಆಶ್ಲೇಷ ಬಲಿ, ಅನ್ನಸಂತರ್ಪಣೆ ಸ್ಥಗಿತ

ಸಾರಾಂಶ

ಕುಕ್ಕೆ ಸುಬ್ರಮಣ್ಯ ದೇಗುಲದಲ್ಲಿ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ. ಅಲ್ಲದೆ ಸಂತರ್ಪಣೆಯನ್ನು ಸ್ಥಗಿತ ಮಾಡಲಾಗಿದೆ. ಗ್ರಹಣ  ಹಿನ್ನೆಲೆ ಈ ಬದಲಾವಣೆ ಮಾಡಲಾಗಿದೆ. 

ಬೆಂಗಳೂರು [ಜು.16] : ಕೇತುಗ್ರಸ್ಥ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ಅನೇಕ ದೇಗುಲಗಳ ಪೂಜೆ, ದರ್ಶನ ಸಮಯ ಬದಲಾವಣೆ ಮಾಡಲಾಗಿದೆ. ಆದರೆ ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಮಾತ್ರ ಯಾವುದೇ ಬದಲಾವಣೆ ಇಲ್ಲ. 

ಎಂದಿನಂತೆ ಧರ್ಮಸ್ಥಳ ಕ್ಷೇತ್ರದಲ್ಲಿ ಪೂಜಾ ಕಾರ್ಯಗಳು ನಡೆಯಲಿವೆ. ರಾತ್ರಿ 8.30ರವರೆಗೂ ಕೂಡ ಮಂಜುನಾಥನ  ದರ್ಶನ ಪಡೆಯಲು ಅವಕಾಶವಿದೆ. 

ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ಗ್ರಹಣ ಹಿನ್ನೆಲೆಯಲ್ಲಿ ಪೂಜಾ ಹಾಗೂ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಸಂಜೆ 6.30 ಕ್ಕೆ ಮಹಾ ಪೂಜೆ ಬಳಿಕ ಕುಕ್ಕೆ ಕ್ಷೇತ್ರದಲ್ಲಿ ಬಾಗಿಲು ಬಂದ್ ಆಗಲಿದೆ. ಪ್ರತಿನಿತ್ಯ  7 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಾಗುತಿತ್ತು. ಆದರೆ ಗ್ರಹಣ ಹಿನ್ನೆಲೆ ಅರ್ಧ ಗಂಟೆ ಮೊದಲು ಬಂದ್ ಮಾಡಲಾಗುತ್ತಿದೆ. 

ಇನ್ನು ಕುಕ್ಕೆ ಕ್ಷೇತ್ರದಲ್ಲಿ ನಿತ್ಯ ನಡೆಯುವ ಆಶ್ಲೇಷ ಬಲಿ ಪೂಜೆ ಹಾಗೂ ಅನ್ನ ಸಂತರ್ಪಣೆಯನ್ನೂ ಗ್ರಹಣ ಹಿನ್ನೆಲೆ ಸ್ಥಗಿತವಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು