ಸಂತ್ರಸ್ತರಿಗೆ ನೆರವಾಗಲು ಪೋಪ್ ಫ್ರಾನ್ಸಿಸ್ ಮನವಿ

Published : Aug 20, 2018, 09:36 AM ISTUpdated : Sep 09, 2018, 10:05 PM IST
ಸಂತ್ರಸ್ತರಿಗೆ ನೆರವಾಗಲು ಪೋಪ್ ಫ್ರಾನ್ಸಿಸ್ ಮನವಿ

ಸಾರಾಂಶ

ಕೇರಳ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಅಂತರಾಷ್ಟ್ರೀಯ ಮಟ್ಟದಲ್ಲೂ ಮನವಿ ಪೋಪ್ ಫ್ರಾನ್ಸಿಸ್ ಮನವಿ 

ವ್ಯಾಟಿಕನ್ ಸಿಟಿ (ಆ. 20): ಪ್ರವಾಹದಲ್ಲಿ ಸಿಲುಕಿರುವ ಕೇರಳದ ಸಂತ್ರಸ್ತರಿಗೆ ನೆರವಾಗುವಂತೆ ಪೋಪ್ ಫ್ರಾನ್ಸಿಸ್ ಅಂತಾರಾಷ್ಟ್ರೀಯ ಸಮುದಾಯಕ್ಕೆ ಭಾನುವಾರ ಕರೆ ನೀಡಿದ್ದಾರೆ.

ಸೇಂಟ್ ಪೀಟರ್ಸ್‌ ಸ್ಕ್ವೇರ್‌ನಲ್ಲಿ ಅವರು ಪ್ರವಾಹ ಸಂತ್ರಸ್ತರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಕೇರಳದ ನಿವಾಸಿಗಳು ಭೀಕರ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಭಾರೀ ಮಳೆಯಿಂದಾಗಿ ಭೂ ಕುಸಿತ, ಜೀವ ಹಾನಿ ಸಂಭವಿಸಿದೆ. ಬೆಳೆ ಹಾಗೂ ಮನೆಗಳಿಗೆ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಸೋದರ ಮತ್ತು ಸೋದರಿಯರು ಕೇರಳಿಗರ ಪರ ನಿಲ್ಲುತ್ತಾರೆ ಹಾಗೂ ಅಂತಾರಾಷ್ಟ್ರೀಯ ಸಮುದಾಯದಿಂದ ಬೆಂಬಲ ವ್ಯಕ್ತವಾಗಲಿದೆ ಎಂಬ ಭರವಸೆ ಹೊಂದಿದ್ದೇನೆ ಎಂದು
ಪೋಪ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯತ್ನಾಳ್ ಭಾಷಣಕ್ಕೆ ಟಾಂಗ್ ಕೊಡಲು ಹೋಗಿ ಯಡವಟ್ಟು ಮಾಡಿಕೊಂಡ ಸಚಿವ ಸಂತೋಷ್ ಲಾಡ್!
ಸವಣೂರು ಘಟನೆ ಕಾಂಗ್ರೆಸ್ ಓಲೈಕೆ ರಾಜಕಾರಣದ ಪ್ರತಿಬಿಂಬ, ರಾಜ್ಯದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆಯೂ ಸಂಸದ ಬೊಮ್ಮಾಯಿ ಕಿಡಿ