
ಬೆಂಗಳೂರು (ನ.22): ಶಾಸ್ತ್ರೀಯ ಸಂಗೀತ ಖ್ಯಾತ ಗಾಯಕ ಮಂಗಲಂ ಪಲ್ಲಿ ಬಾಲಮುರಳಿಕೃಷ್ಣ (86) ಅನಾರೋಗ್ಯದಿಂದ ಚೆನ್ನೈನ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ.
ಜು.6,1930 ರಂದು ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಜನಿಸಿದ್ದರು. ಕನ್ನಡದ ಸಂಧ್ಯಾರಾಗ, ಹಂಸಗೀತೆ ಸೇರಿದಂತೆ ಹಲವಾರು ಸಿನಿಮಾದಲ್ಲಿ ಹಾಡಿದ್ದಾರೆ. ಕನ್ನಡ, ತಮಿಳು, ಬೆಂಗಾಲಿ, ಹಿಂದಿ ಸೇರಿದಂತೆ ಬಹುಭಾಷಾ ಗಾಯಕರಾಗಿರುವ ಇವರು 25 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿ ಶಾಸ್ತ್ರೀಯ ಸಂಗೀತ ದಿಗ್ಗಜ ಎನಿಸಿಕೊಂಡಿದ್ದಾರೆ.
ಶಾಸ್ತ್ರೀಯ ಸಂಗೀತದಲ್ಲಿ ತಮ್ಮದೇ ಚಾಪು ಮೂಡಿಸಿದ್ದರು. ಇವರ ಗಾಯನಕ್ಕೆ ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿಗಳು ಲಭಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.